ADVERTISEMENT

ಮಹಿಳೆ ಹತ್ಯೆ ಮಾಡಿ ಚಿನ್ನಾಭರಣ ದೋಚಿದ ಕಳ್ಳರು

​ಪ್ರಜಾವಾಣಿ ವಾರ್ತೆ
Published 3 ಜುಲೈ 2019, 13:22 IST
Last Updated 3 ಜುಲೈ 2019, 13:22 IST

ರಾಮನಗರ: ಬೆಂಗಳೂರು ದಕ್ಷಿಣ ತಾಲ್ಲೂಕಿನ ಲಕ್ಷ್ಮಿಪುರ ಗ್ರಾಮದ ಮನೆಯಲ್ಲಿ ಬುಧವಾರ ಹಾಡಹಗಲೇ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಗಾಯತ್ರಿ (32) ಮೃತರು. ಅವರ ಪತಿ ಕೆಲಸದ ನಿಮಿತ್ತ ಹೊರ ಹೋಗಿದ್ದು, ಮಕ್ಕಳು ಶಾಲೆಗೆ ತೆರಳಿದ್ದರು. ಮಹಿಳೆ ಮನೆಯಲ್ಲಿ ಒಬ್ಬರೇ ಇದ್ದದ್ದನ್ನು ಗಮನಿಸಿದ ದುಷ್ಕರ್ಮಿಗಳು ಒಳಗೆ ನುಗ್ಗಿದ್ದಾರೆ. ಬಳಿಕ ಆಯುಧದಿಂದ ಮಹಿಳೆಯ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿ, ಮನೆಯಲ್ಲಿನ ಬಂಗಾರ, ನಗದು ಇನ್ನಿತರ ವಸ್ತುಗಳನ್ನು ದೋಚಿದ್ದಾರೆ. ಸಂಜೆ ಮಕ್ಕಳು ಶಾಲೆಯಿಂದ ಮನೆಗೆ ಬಂದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ರಾಮನಗರ ಎಸ್ಪಿ ಚೇತನ್‌ ಸಿಂಗ್ ರಾಥೋರ್‌ ಹಾಗೂ ಶ್ವಾನ ದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದರು. ಕಗ್ಗಲೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.