ADVERTISEMENT

ಊಟವಿಲ್ಲದೇ ಅಸ್ವಸ್ಥರಾಗಿದ್ದ ಇಬ್ಬರು ಕಾರ್ಮಿಕರು ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2020, 16:01 IST
Last Updated 29 ಮಾರ್ಚ್ 2020, 16:01 IST

ರಾಮನಗರ: ನಗರದ ಲಾರಿ ಸ್ಟ್ಯಾಂಡ್‌ ಬಳಿ ಊಟವಿಲ್ಲದೇ ಅಸ್ವಸ್ಥರಾಗಿದ್ದ ಇಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಇಬ್ಬರು ಕೂಲಿ ಕಾರ್ಮಿಕರನ್ನು ಗಮನಿಸಿದ ಬಿಜೆಪಿ ಮುಖಂಡರು ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರು. ಇಬ್ಬರನ್ನೂ ವೈದ್ಯರು ತಪಾಸಣೆಗೆ ಒಳಪಡಿಸಿದ್ದು, ಊಟ ನೀಡಲಾಯಿತು. ಊಟಕ್ಕಾಗಿ ಅಲೆಯುತ್ತ ಇಂದಿರಾ ಕ್ಯಾಂಟೀನ್‌ಗೆ ಬಂದಿದ್ದ ಐವರು ಕಾರ್ಮಿಕರನ್ನು ಪುನರ್‌ ವಸತಿ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಐವರು ಕಾರ್ಮಿಕರು ಊಟ ಮಾಡಲೆಂದು ಕ್ಯಾಂಟೀನ್ ಗೆ ಬಂದಿದ್ದರು. ಆದರೆ ಅಷ್ಟರಲ್ಲೇ ಊಟ ಖಾಲಿಯಾಗಿತ್ತು. ಇದನ್ನು ಗಮನಿಸಿದ ನಗರಸಭೆ ಸಿಬ್ಬಂದಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆ ತಂದರು. ಅಲ್ಲಿಂದ ಅವರನ್ನು ಪುನರ್‌ವಸತಿ ಕೇಂದ್ರಕ್ಕೆ ಕಳುಹಿಸಲಾಯಿತು.ಈ ಕಾರ್ಮಿಕರು ಮದ್ದೂರು, ಮಂಡ್ಯ ಮೊದಲಾದ ಕಡೆಯಿಂದ ಬಂದವಾರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT