ADVERTISEMENT

‘ಮಗುವಿಗೆ ಹಳದಿ ಹಾಲೇ ಅಮೃತ’

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2019, 13:13 IST
Last Updated 6 ಆಗಸ್ಟ್ 2019, 13:13 IST
ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ ಕಾರ್ಯಕ್ರಮವನ್ನು ಡಾ.ಅಶೋಕ್ ವೆಂಕೋಬರಾವ್ ಉದ್ಘಾಟಿಸಿದರು
ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ ಕಾರ್ಯಕ್ರಮವನ್ನು ಡಾ.ಅಶೋಕ್ ವೆಂಕೋಬರಾವ್ ಉದ್ಘಾಟಿಸಿದರು   

ಚನ್ನಪಟ್ಟಣ: ‘ತಾಯ ಎದೆಯ ಹಳದಿ ಹಾಲು ಮಕ್ಕಳ ಬೆಳವಣಿಗೆಗೆ ಸಹಕಾರಿ’ ಎಂದು ಸಾರ್ವಜನಿಕ ಆಸ್ಪತ್ರೆ ಆರೋಗ್ಯಾಧಿಕಾರಿ ಡಾ.ಅಶೋಕ್ ವೆಂಕೋಬರಾವ್ ಹೇಳಿದರು.

ಇಲ್ಲಿನ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ‘ವಿಶ್ವ ಸ್ತನ್ಯಪಾನ ಸಪ್ತಾಹ’ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ತಾಯಿಯರು ಮಗುವಿಗೆ ಸ್ತನ್ಯಪಾನ ಮಾಡಿಸುವುದರ ಮೂಲಕ ಆರೋಗ್ಯದ ಬೆಳವಣಿಗೆಯಲ್ಲಿ ಕಾಳಜಿ ವಹಿಸಬೇಕು. ಇದರಿಂದ ತಾಯಿಯ ಆರೋಗ್ಯವೂ ಸುಧಾರಿಸುತ್ತದೆ. ಮಗು ಜನಿಸಿದಾಗ ಉತ್ಪತ್ತಿಯಾಗುವ ಹಳದಿ ಹಾಲನ್ನು ಅಗತ್ಯವಾಗಿ ಕುಡಿಸಬೇಕು’ ಎಂದು ಹೇಳಿದರು.

ADVERTISEMENT

ಆಸ್ಪತ್ರೆಯ ಹಿರಿಯ ಫಾರ್ಮಸಿಸ್ಟ್ ಅಧಿಕಾರಿ ಎಂ.ವೇದಮೂರ್ತಿ ಮಾತನಾಡಿ, ‘ಮಕ್ಕಳ ಆರೋಗ್ಯಕ್ಕೆ ತಾಯಿ ಹಾಲು ಪೂರಕ. ಅದು ಪೌಷ್ಟಿಕತೆಯಿಂದ ಕೂಡಿರುವುದರಿಂದ ಮಕ್ಕಳ ಬೆಳವಣಿಗೆಗೆ ಸಹಾಯಕ. ಹಲವು ತಾಯಂದಿರು, ಮಗುವಿಗೆ ಹಾಲುಣಿಸಿದರೆ ತಮ್ಮ ಸೌಂದರ್ಯ ಹಾಳಾಗುತ್ತದೆ ಎಂಬ ತಪ್ಪು ಕಲ್ಪನೆಯಿಂದ ಹಾಲುಣಿಸುವುದನ್ನು ಅರ್ಧದಲ್ಲೇ ನಿಲ್ಲಿಸುತ್ತಾರೆ. ಕನಿಷ್ಟ ಒಂದು ವರ್ಷವಾದರೂ ಹಾಲುಣಿಸಬೇಕು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಆಸ್ಪತ್ರೆಯ ಶುಷ್ರೂಷಕಿಯರ ಅಧೀಕ್ಷಕಿ ಸರಸ್ವತಿ ಮಾತನಾಡಿ, ‘ಮಗುವಿಗೆ ತಾಯಿಯ ಹಾಲು ಅಮೃತವಿದ್ದಂತೆ’ ಎಂದರು.

ಆರೋಗ್ಯ ಮಿತ್ರ ಮೋಹನ್ ಕುಮಾರ್, ಲ್ಯಾಬ್‌ನ ಪರೀಕ್ಷಕರಾದ ಸುಧಾಮಣಿ, ಸೋನಿಯಾ, ಶುಷ್ರೂಷಕಿ ಪಾರ್ವತಿ ಬಾಯಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.