ADVERTISEMENT

ಯೇಸು ಪ್ರತಿಮೆ ನಿರ್ಮಾಣ ವಿರೋಧಿಸಿ ಬಿಜೆಪಿ ಪ್ರತಿಭಟನೆ 13ರಂದು

​ಪ್ರಜಾವಾಣಿ ವಾರ್ತೆ
Published 4 ಜನವರಿ 2020, 12:08 IST
Last Updated 4 ಜನವರಿ 2020, 12:08 IST
ಸಿ.ಪಿ. ಯೋಗೇಶ್ವರ್‌
ಸಿ.ಪಿ. ಯೋಗೇಶ್ವರ್‌   

ರಾಮನಗರ: ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ವಿರೋಧಿಸಿ ಬಿಜೆಪಿಯು ಸಮಾನ ಮನಸ್ಕ ಸಂಘಟನೆಗಳ ಜೊತೆಗೂಡಿ ಇದೇ 13ರಂದು ಕನಕಪುರದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ ಎಂದು ಪಕ್ಷದ ಮುಖಂಡ ಸಿ.ಪಿ. ಯೋಗೇಶ್ವರ್‌ ತಿಳಿಸಿದರು.

ನಗರದಲ್ಲಿ ಶನಿವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಕಪಾಲ ಬೆಟ್ಟ ಅರಣ್ಯ ಪ್ರದೇಶದಲ್ಲಿ ಇದೆ. ಅದೊಂದು ಗೋಮಾಳ. ಅಲ್ಲಿ ಅನಧಿಕೃತವಾಗಿ ಯೇಸು ಪ್ರತಿಮೆ ನಿರ್ಮಾಣ ಆಗುತ್ತಿರುವುದು ತಪ್ಪು. ಇದನ್ನು ಖಂಡಿಸಿ ಶಾಂತಿಯುತ ಪ್ರತಿಭಟನೆ ನಡೆಯಲಿದೆ. ಅಂದು ಬೆಟ್ಟಕ್ಕೂ ತೆರಳಿ ಪ್ರತಿಭಟನೆ ನಡೆಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT