ADVERTISEMENT

ಜಿಲ್ಲಾಧಿಕಾರಿಗೆ ನಾಲ್ಕು ವರ್ಷ ವರ್ಗಾವಣೆ ಬೇಡ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2011, 9:55 IST
Last Updated 14 ಅಕ್ಟೋಬರ್ 2011, 9:55 IST

ಶಿವಮೊಗ್ಗ: ಜಿಲ್ಲಾಧಿಕಾರಿ ವಿ. ಪೊನ್ನುರಾಜ್ ಅವರನ್ನು ಇನ್ನೂ ನಾಲ್ಕು ವರ್ಷ ವರ್ಗಾವಣೆ ಮಾಡದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರಿಗೆ ಮನವಿ ಮಾಡಿದರು.

ಜಿ.ಪಂ. ಸಭಾಂಗಣದಲ್ಲಿ ಗುರುವಾರ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈಗ ನಡೆಯುತ್ತಿರುವ ಕಾಮಗಾರಿಗಳು ಬೇಗ ಪೂರ್ಣಗೊಳ್ಳಬೇಕಾದರೆ ಇವರ ಸೇವೆ ಜಿಲ್ಲೆಗೆ ಕನಿಷ್ಠ 4 ವರ್ಷ ಬೇಕು ಎಂದರು.

ಇದಕ್ಕೂ ಮುನ್ನ ನಗರದ ಗಾಂಧಿಪಾರ್ಕ್‌ನಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲನೆ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ, ಈಗಾಗಲೇ ಕೈಗೆತ್ತಿಕೊಂಡಿರುವ ಕಾಮಗಾರಿ, ಯೋಜನೆ ಸಂಪೂರ್ಣ ಆಗುವವರೆಗೂ ನೀವು ವರ್ಗಾವಣೆ ಮಾಡಿಸಿಕೊಳ್ಳುವಂತಿಲ್ಲ ಎಂದು ಪೊನ್ನುರಾಜ್ ಅವರಿಗೆ ಸೂಚಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.