ಭದ್ರಾವತಿ: ಡೆಂಗೆ ವಿರುದ್ಧ ಜಾಗೃತಿ ಅವಶ್ಯ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಗುಡದಪ್ಪ ಹೇಳಿದರು.
ಸೋಮವಾರ ತಾಲ್ಲೂಕು ಆಡಳಿತ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜರುಗಿದ ಡೆಂಗೆ ಕುರಿತ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ನಡೆಸಲಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಲ್ಲಿ ತನಕ ತಾಲ್ಲೂಕಿನಲ್ಲಿ 21 ಡೆಂಗೆ ಜ್ವರದ ಪ್ರಕರಣಗಳು ದಾಖಲಾಗಿದ್ದು, ಆಪೈಕಿ 5 ಪ್ರಕರಣಗಳು ಗ್ರಾಮಾಂತರ ಪ್ರದೇಶಗಳಲ್ಲಿ ಕಂಡು ಬಂದಿದೆ. ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಜನರ ಬಳಿ ತೆರಳಿ ಮನೆ ಜಾಗೃತಿ ಮೂಡಿಸುವ ಕೆಲಸ ನಡೆಸಿದ್ದಾರೆ ಎಂದರು.
ತಹಶೀಲ್ದಾರ್ ಸಿದ್ದಮಲ್ಲಪ್ಪ, ಉಪ ತಹಸೀಲ್ದಾರ್ ನಫೀಜಾ ಬೇಗಂ, ತಾ.ಪಂ. ಕಾರ್ಯನಿರ್ವಹ ಣಾಧಿಕಾರಿ ಮಲ್ಲೇಶಪ್ಪ, ನಗರಸಭಾ ಆಯುಕ್ತ ಬಸವರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಯ್ಯ, ಮಾಜಿ ನಗರಸಭಾ ಸದಸ್ಯರಾದ ಬಿ.ಟಿ.ನಾಗರಾಜ್, ದಿಲ್ದಾರ್, ಅಂಜುಮಾನ್ ಸಂಸ್ಥೆ ಪೀರ್ ಶರೀಫ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕಂದಾಯ ಇಲಾಖೆ ಸಿಬ್ಬಂದಿ, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.