ADVERTISEMENT

ಸಮುದಾಯ ನಿಂದನೆ: ಯುವತಿ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2018, 6:35 IST
Last Updated 29 ಮಾರ್ಚ್ 2018, 6:35 IST

ಶಿವಮೊಗ್ಗ: ಮಸೀದಿ ಮುಂದೆ ನಿಂತು ತಮ್ಮದೇ ಸಮುದಾಯದ ಯುವತಿಯೊಬ್ಬಳು ಕೆಟ್ಟದಾಗಿ ಮುಸ್ಲಿಂ ಸಮುದಾಯವನ್ನು ನಿಂದಿಸಿದ್ದಾಳೆ ಎಂದು ಆರೋಪಿಸಿ ಸವಾಯಿಪಾಳ್ಯ ಮಸೀದಿಯ ಗುರುಗಳು ಹಾಗೂ ಸಮಾಜದ ನೂರಾರು ಮುಖಂಡರು ದೊಡ್ಡಪೇಟೆ ಠಾಣೆ ಮುಂದೆ ಬುಧವಾರ ಜಮಾಯಿಸಿ, ಆಕ್ರೋಶ ವ್ಯಕ್ತಪಡಿಸಿದರು.

ಆ ಯುವತಿ ಹಿಂದೆ ಕಾಣದ ಶಕ್ತಿಯ ಕೈವಾಡವಿದೆ. ಮುಸ್ಲಿಂ ಸಮುದಾಯದ ವಿರುದ್ಧವೇ ಅಪಪ್ರಚಾರ ಮಾಡುತ್ತಿದ್ದಾರೆ. ಪೊಲೀಸರ ಮುಂದೆಯೇ ನಿಂದನೆ ಮಾಡಿದ್ದಾರೆ. ಮಸೀದಿಯಲ್ಲಿ ಅಜಾನ್ ಕೂಗಬಾರದು ಎಂದು ಹೇಳಿದ್ದಾರೆ. ಚುನಾವಣೆ ಸಮಯದಲ್ಲಿ ಈ ಘಟನೆ ಶಾಂತಿ ಕದಡಲು ಕಾರಣವಾಗಿದೆ. ಹಾಗಾಗಿ ಯುವತಿ ಹಾಗೂ ಅದರ ಹಿಂದೆ ಇರುವವರ ಬಗ್ಗೆ ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ದೊಡ್ಡಪೇಟೆ ಪೊಲೀಸರು ಯುವತಿ ವಿರುದ್ಧ ದೂರು ದಾಖಲಿಸಿಕೊಂಡರು.

ADVERTISEMENT

ಘಟನೆ ಹಿನ್ನೆಲೆ: ಇಲ್ಲಿನ ಸವಾಯಿಪಾಳ್ಯ ಕ್ರಾಸ್‌ನಲ್ಲಿ ಹಿಂದೂ ಹುಡುಗ ಹಾಗೂ ಹುಡುಗಿಯ ಜತೆ ಮುಸ್ಲಿಂ ಯುವತಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ತಡೆದ ಕೆಲ ಹುಡುಗರು ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದರು.

‘ನೀನು ಮುಸ್ಲಿಂ ಯುವತಿಯಾಗಿ ಹಿಂದೂ ಹುಡುಗನ ಜತೆಗೆ ಹೋಗುವುದಕ್ಕೆ ನಾಚಿಕೆ ಆಗುವುದಿಲ್ಲವೇ? ನೀನು, ನಿಮ್ಮ ಕುಟುಂಬದವರು ಊರು ಬಿಟ್ಟು ಹೋಗಬೇಕು. ಇಲ್ಲವಾದರೆ ಏನು ಮಾಡಬೇಕು ಎಂದು ನಮಗೆ ತಿಳಿದಿದೆ' ಎಂದು ಬೆದರಿಕೆ ಹಾಕಿದ್ದರು.

ಈ ಸಂಬಂಧ ಯುವತಿ ದೂರು ದಾಖಲಿಸಿದ್ದರು. ಈಗ ಮುಸ್ಲಿಂ ಸಮುದಾಯದ ಮುಖಂಡರು ಈ ಯುವತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.