ಸೊರಬ: ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ, ಉಪಾಧ್ಯಕ್ಷ ಸೇರಿ 19 ಸದಸ್ಯರು ತಮ್ಮ ಒಂದು ತಿಂಗಳ ಗೌರವ ಧನ ₹61 ಸಾವಿರ ಚೆಕ್ ಅನ್ನು ಮಂಗಳವಾರ ತಹಶೀಲ್ದಾರ್ ಪಟ್ಟರಾಜಗೌಡ ಅವರ ಮೂಲಕ ತಾಲ್ಲೂಕು ಆಡಳಿತಕ್ಕೆ ನೀಡಿದರು.
ಅಧ್ಯಕ್ಷೆ ನಯನಾ ಶ್ರೀಪಾದ ಹೆಗಡೆ ಮಾತನಾಡಿ, ’ಕೊರೊನಾ ನಿಯಂತ್ರಣಕ್ಕೆ ಜಾಗೃತಿಯೊಂದಿಗೆ ಎಲ್ಲರ ಸಹಕಾರ ಮುಖ್ಯ. ಅನವಶ್ಯಕವಾಗಿ ಜನರು ಓಡಾಟ ನಿಲ್ಲಿಸಬೇಕಿದೆ. ತಾಲ್ಲೂಕು ಆಡಳಿತ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಯಾವುದೇ ಸಹಕಾರ ಬಯಸಿದರೂ ತಾಲ್ಲೂಕು ಪಂಚಾಯಿತಿ ನೆರವಿಗೆ ಸಿದ್ಧವಿದೆ. ₹61 ಸಾವಿರಗಳನ್ನು ಸಂಕಷ್ಟದಲ್ಲಿರುವ ಕುಟುಂಬಗಳ ನೆರವಿಗೆ ಬಳಸಿಕೊಳ್ಳಬೇಕು‘ ಎಂದರು.
ಶ್ರೀಪಾದ ಹೆಗಡೆ ಐದು ಮಂದಿ ಬಡವರಿಗೆ ಸ್ವಂತ ಖರ್ಚಿನಲ್ಲಿ ಆಹಾರ ಪದಾರ್ಥಗಳನ್ನು ವಿತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.