ADVERTISEMENT

30ರಿಂದ ‘ಸಕಾಲ’ ಸಪ್ತಾಹ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 16:32 IST
Last Updated 27 ನವೆಂಬರ್ 2020, 16:32 IST

ಶಿವಮೊಗ್ಗ: ಸಾರ್ವಜನಿಕರಲ್ಲಿ ಸಕಾಲ ಯೋಜನೆ ಬಗ್ಗೆ ಅರಿವು ಮೂಡಿಸುವ ನಿಟ್ಟನಲ್ಲಿ ಹಾಗೂ ಸಕಾಲದಡಿ ಸ್ವೀಕರಿಸಿ ಬಾಕಿ ಉಳಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇ ಮಾಡಲು ನ.30ರಿಂದ ಎರಡು ಹಂತಗಳಲ್ಲಿ ‘ಸಕಾಲ’ ಸಪ್ತಾಹವನ್ನು ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ.

ನ.30ರಿಂದ ಡಿ.5ರವರೆಗೆ ನಗರಾಭಿವೃದ್ಧಿ, ಕಂದಾಯ, ಸಾರಿಗೆ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗಳಲ್ಲಿ ಹಾಗೂ ಡಿ.7ರಿಂದ 11ರವರೆಗೆ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಸಪ್ತಾಹವನ್ನು ಆಚರಿಸಲಾಗುವುದು.

ಹೊಸದಾಗಿ ಸ್ವೀಕರಿಸಿರುವ ಅರ್ಜಿಗಳನ್ನು ‘ಸಕಾಲ’ದಡಿ ಸ್ವೀಕರಿಸಿ ನಿಗದಿತ ಕಾಲಮಿತಿಯಲ್ಲಿ ವಿಲೇ ಮಾಡುವುದು, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ‘ಸಕಾಲ’ ತಂಡದಿಂದ ಕಚೇರಿಗಳಿಗೆ ಭೇಟಿ ಹಾಗೂ ತಪಾಸಣೆ ನಡೆಸಲಾಗುವುದು. ಸಾರ್ವಜನಿಕರ ಅಭಿಪ್ರಾಯ ಕ್ರೋಡೀಕರಿಸಲು ಹೆಲ್ಪ್ ಡೆಸ್ಕ್ ಸಹಾಯದೊಂದಿಗೆ ಪ್ರಶ್ನಾವಳಿಯನ್ನು ಭರ್ತಿ ಮಾಡಿಸುವುದು ಸೇರಿ ‘ಸಕಾಲ’ದ ಪ್ರಚಾರ ಕಾರ್ಯಕ್ರಮಗಳನ್ನು ಸಪ್ತಾಹದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

‘ಸಕಾಲ’ ಯೋಜನೆಯಡಿ ಒಟ್ಟು 98 ಇಲಾಖೆ, ಸಂಸ್ಥೆಗಳ 1020ಕ್ಕೂ ಹೆಚ್ಚಿನ ನಾಗರಿಕ ಕೇಂದ್ರಿತ ಸೇವೆಗಳನ್ನು ಸೇರ್ಪಡೆ ಮಾಡಲಾಗಿದೆ. ಈವರೆಗೆ 22,88,81,652 ಅರ್ಜಿಗಳನ್ನು ಸ್ವೀಕರಿಸಿ 22,82,55,866 ಅರ್ಜಿಗಳನ್ನು ವಿಲೇ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.