ADVERTISEMENT

₹ 5 ಲಕ್ಷ ಮೌಲ್ಯದ ಶ್ರೀಗಂಧ ಅಕ್ರಮ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2020, 16:36 IST
Last Updated 11 ನವೆಂಬರ್ 2020, 16:36 IST
ಸಾಗರದಲ್ಲಿ ಬುಧವಾರ ₹ 5 ಲಕ್ಷ ಮೌಲ್ಯದ ಶ್ರೀಗಂಧದ ತುಂಡುಗಳನ್ನು ಪೊಲೀಸ್ ಅರಣ್ಯ ಸಂಚಾರ ದಳದ ಸಿಬ್ಬಂದಿ ವಶಪಡಿಸಿಕೊಂಡರು
ಸಾಗರದಲ್ಲಿ ಬುಧವಾರ ₹ 5 ಲಕ್ಷ ಮೌಲ್ಯದ ಶ್ರೀಗಂಧದ ತುಂಡುಗಳನ್ನು ಪೊಲೀಸ್ ಅರಣ್ಯ ಸಂಚಾರ ದಳದ ಸಿಬ್ಬಂದಿ ವಶಪಡಿಸಿಕೊಂಡರು   

ಸಾಗರ: ಇಲ್ಲಿನ ಎಸ್.ಎನ್. ನಗರ ಬಡಾವಣೆಯಲ್ಲಿ ಮಂಜುನಾಥ ಎಂಬುವವರು ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ₹ 5 ಲಕ್ಷ ಮೌಲ್ಯದ ಶ್ರೀಗಂಧದ ತುಂಡುಗಳನ್ನು ಪೊಲೀಸ್ ಅರಣ್ಯ ಸಂಚಾರ ದಳದ ಸಿಬ್ಬಂದಿ ಬುಧವಾರ ವಶಪಡಿಸಿಕೊಂಡಿದ್ದಾರೆ.

ಸಿಬ್ಬಂದಿ ದಾಳಿ ನಡೆಸಿದಾಗ ಮಂಜುನಾಥ ಅವರ ಮನೆಯ ಮಹಡಿ ಮೆಟ್ಟಿಲಿನ ಕೆಳಗೆ ಶ್ರೀಗಂಧದ ತುಂಡುಗಳನ್ನು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ.

ಪೊಲೀಸ್ ಅರಣ್ಯ ಸಂಚಾರ ದಳದ ಸಬ್ ಇನ್‌ಸ್ಪೆಕ್ಟರ್ ಮಲ್ಲಿಕಾರ್ಜುನ ಬಿ., ಸಿಬ್ಬಂದಿ ರಂಗನಾಥ, ರತ್ನಾಕರ, ಗಿರೀಶ್, ವಿಶ್ವನಾಥ, ಮಂಜುನಾಥ ಕಾರ್ಯಾಚರಣೆ ಕೈಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.