ADVERTISEMENT

ನಾನೂ ಆಕಾಂಕ್ಷಿ: ಎಸ್‌. ರುದ್ರೇಗೌಡ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2018, 6:58 IST
Last Updated 2 ಫೆಬ್ರುವರಿ 2018, 6:58 IST

ಶಿವಮೊಗ್ಗ: ನಗರ ವಿಧಾನಸಭಾ ಕ್ಷೇತ್ರಕ್ಕೆ ನಾನೂ ಆಕಾಂಕ್ಷಿ. ಆದರೆ, ವರಿಷ್ಠರ ನಿರ್ಧಾರಕ್ಕೆ ಬದ್ಧ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್‌. ರುದ್ರೇಗೌಡ ಪ್ರತಿಕ್ರಿಯೆ ನೀಡಿದರು. ನಗರದಲ್ಲಿ ಬುಧವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಪಕ್ಷದ ಟಿಕೆಟ್‌ ಪಡೆದು ಸ್ಪರ್ಧಿಸಲು ಎಲ್ಲ ಕ್ಷೇತ್ರಗಳಲ್ಲೂ ಸಾಕಷ್ಟು ಮುಖಂಡರು ಬೇಡಿಕೆ ಇಟ್ಟಿದ್ದಾರೆ. ಈಗಾಗಲೇ ಒಂದು ಹಂತದ ಸರ್ವೆ ಕಾರ್ಯ ನಡೆದಿದೆ. ಎರಡನೇ ಹಂತದ ಸರ್ವೆಯ ನಂತರವೇ ಅಂತಿಮ ಪಟ್ಟಿ ಹೊರಬೀಳುವ ನಿರೀಕ್ಷೆ ಇದೆ ಎಂದರು.

ಫೆ.15ರಂದು ಮೊದಲ ಪಟ್ಟಿ ಬಿಡುಗಡೆಯಾಗುವ ಕುರಿತು ಮಾಹಿತಿ ಇಲ್ಲ. ಕೆಲವು ಕ್ಷೇತ್ರಗಳಲ್ಲಿ ಪರೋಕ್ಷವಾಗಿ ಅಭ್ಯರ್ಥಿಗಳನ್ನು ಗುರುತಿಸಲಾಗಿದೆ. ಕೆಲವು ಕ್ಷೇತ್ರಗಳಲ್ಲಿ ಗೊಂದಲವಿದೆ. ಯಾರಿಗೇ ಟಿಕೆಟ್‌ ನೀಡಿದರೂ ಬಿಜೆಪಿ ಗೆಲ್ಲಿಸುವುದೇ ಗುರಿ ಎಂದು ಸ್ಪಷ್ಟಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.