ADVERTISEMENT

ಆತಂಕದ ನಡುವೆ ಸಕಾಲಕ್ಕೆ ಪರೀಕ್ಷಾ ಕೇಂದ್ರ ತಲುಪಿದ ಪ್ರಶ್ನೆಪತ್ರಿಕೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2020, 15:35 IST
Last Updated 3 ಜುಲೈ 2020, 15:35 IST
ಸಾಗರ ತಾಲ್ಲೂಕಿನ ಅಂಬಾರಗೋಡ್ಲು ರಸ್ತೆಯಲ್ಲಿ ಶುಕ್ರವಾರ ಮರ ಮುರಿದು ಬಿದ್ದಿದ್ದು ಸ್ಥಳೀಯರ ನೆರವಿನಿಂದ ಮರವನ್ನು ತೆರವುಗೊಳಿಸಲಾಯಿತು
ಸಾಗರ ತಾಲ್ಲೂಕಿನ ಅಂಬಾರಗೋಡ್ಲು ರಸ್ತೆಯಲ್ಲಿ ಶುಕ್ರವಾರ ಮರ ಮುರಿದು ಬಿದ್ದಿದ್ದು ಸ್ಥಳೀಯರ ನೆರವಿನಿಂದ ಮರವನ್ನು ತೆರವುಗೊಳಿಸಲಾಯಿತು   

ಸಾಗರ: ತಾಲ್ಲೂಕಿನ ತುಮರಿಯ ಎಸ್ಸೆಎಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆಪತ್ರಿಕೆ ಸಾಗಿಸುತ್ತಿದ್ದ ವಾಹನದ ಎದುರು ಅಂಬಾರಗೋಡ್ಲು ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ಮರ ಮುರಿದು ಬಿದ್ದಿದ್ದರಿಂದ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

ವಾಹನದಲ್ಲಿದ್ದ ಮಾರ್ಗಾಧಿಕಾರಿ, ಚಾಲಕ, ಸ್ಥಳೀಯರು, ಅರಣ್ಯ ಇಲಾಖೆ ಸಿಬ್ಬಂದಿಯ ನೆರವಿನಿಂದ ಮರವನ್ನು ತೆರವುಗೊಳಿಸಿ ಸಕಾಲದಲ್ಲಿ ಪ್ರಶ್ನೆಪತ್ರಿಕೆ ಪರೀಕ್ಷಾ ಕೇಂದ್ರವನ್ನು ತಲುಪುವಂತೆ ಮಾಡಿದ್ದಾರೆ. ಮರ ಬಿದ್ದ ಕಾರಣ ವಿದ್ಯುತ್ ತಂತಿ ತುಂಡಾಗಿದ್ದು ಮೆಸ್ಕಾಂ ಸಿಬ್ಬಂದಿ ಅದನ್ನು ಸರಿಪಡಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಬಿಂಬ ಕೆ.ಆರ್. ಸ್ಥಳಕ್ಕೆ ಭೇಟಿ ನೀಡಿದ್ದರು. ವಿದ್ಯಾರ್ಥಿಗಳ ಆತಂಕ ನಿವಾರಣೆಗೆ ಸಹಕರಿಸಿದ ಎಲ್ಲರಿಗೂ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.