ADVERTISEMENT

ಹಿಂದುಳಿದವರ ಅಭಿವೃದ್ಧಿಗೆ ಶ್ರಮಿಸಿದ್ದ ಸಂತ: ಕೆ.ಎಚ್. ಪುಟ್ಟಪ್ಪ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2022, 2:35 IST
Last Updated 11 ಸೆಪ್ಟೆಂಬರ್ 2022, 2:35 IST
ಶಿಕಾರಿಪುರದಲ್ಲಿ ಶನಿವಾರ ನಡೆದ ನಾರಾಯಣಗುರುಗಳ ಜಯಂತಿ ಕಾರ್ಯಕ್ರಮವನ್ನು ಪುರಸಭೆ ಅಧ್ಯಕ್ಷೆ ರೇಖಾಬಾಯಿ ಮಂಜುನಾಥ್ ಸಿಂಗ್ ಉದ್ಘಾಟಿಸಿದರು.
ಶಿಕಾರಿಪುರದಲ್ಲಿ ಶನಿವಾರ ನಡೆದ ನಾರಾಯಣಗುರುಗಳ ಜಯಂತಿ ಕಾರ್ಯಕ್ರಮವನ್ನು ಪುರಸಭೆ ಅಧ್ಯಕ್ಷೆ ರೇಖಾಬಾಯಿ ಮಂಜುನಾಥ್ ಸಿಂಗ್ ಉದ್ಘಾಟಿಸಿದರು.   

ಶಿಕಾರಿಪುರ:ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಾರಾಯಣಗುರುಗಳು ಶ್ರಮಿಸಿದ್ದರು. ನಾರಾಯಣಗುರು ಸೇರಿದಂತೆ ಸಮಾಜದಉದ್ಧಾರಕ್ಕಾಗಿ ಶ್ರಮಿಸಿದವರನ್ನುಒಂದು ಜಾತಿಗೆ ಸೀಮಿತಗೊಳಿಸಬಾರದು ಎಂದು ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಉಪನ್ಯಾಸಕ ಕೆ.ಎಚ್. ಪುಟ್ಟಪ್ಪಹೇಳಿದರು.

ತಾಲ್ಲೂಕು ಪಂಚಾಯಿತಿಯಲ್ಲಿ ಶನಿವಾರ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಆರ್ಯ ಈಡಿಗ ಸಮಾಜ ಆಶ್ರಯದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾರಾಯಣಗುರುಗಳು ಕೇರಳದಲ್ಲಿ ಹಿಂದುಳಿದ ವರ್ಗಗಳ ಪರ ಚಳುವಳಿ ನಡೆಸಿದ್ದರು. ಹಿಂದುಳಿದ ವರ್ಗಗಳನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಿದ್ದರು ಎಂದು ಹೇಳಿದರು.

ADVERTISEMENT

ಪುರಸಭೆ ಅಧ್ಯಕ್ಷೆ ರೇಖಾಬಾಯಿ ಮಂಜುನಾಥ್ ಸಿಂಗ್ ಉದ್ಘಾಟಿಸಿದರು.

ತಹಶೀಲ್ದಾರ್ ಎಂ.ಪಿ. ಕವಿರಾಜ್, ಉಪತಹಶೀಲ್ದಾರ್ ಮಂಜುನಾಥ್, ಸಿಡಿಪಿಒ ನಂದಕುಮಾರ್, ಆರ್ಯ ಈಡಿಗ ಸಮಾಜದ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.