ADVERTISEMENT

ಶಿಕಾರಿಪುರ: ವೇಗವಾಗಿ ಬೈಕ್ ಚಲಾಯಿಸಿದ್ದಕ್ಕೆ ಯುವಕನಿಗೆ ನಾಲ್ವರಿಂದ ಚಾಕು ಇರಿತ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2024, 4:30 IST
Last Updated 7 ಫೆಬ್ರುವರಿ 2024, 4:30 IST
   

ಶಿಕಾರಿಪುರ: ಪಟ್ಟಣದ ದೊಡ್ಡಪೇಟೆಯಲ್ಲಿ ಮಂಗಳವಾರ ರಾತ್ರಿ ವೇಗವಾಗಿ ಬೈಕ್ ಚಲಾಯಿಸಿದ್ದನ್ನು ಆಕ್ಷೇಪಿಸಿದ ವಿಚಾರ ವಾಗ್ವಾದಕ್ಕೆ ಕಾರಣವಾಗಿ ಯುವಕನಿಗೆ ಚಾಕು ಇರಿಯಲಾಗಿದೆ.

ಇಲ್ಲಿನ ದೊಡ್ಡಪೇಟೆ ನಿವಾಸಿ, ಕುಮದ್ವತಿ ಕಾಲೇಜಿನಲ್ಲಿ ಕಂಪ್ಯೂಟರ್ ಆಪರೇಟರ್ ಸುಶೀಲ್ (23) ಚಾಕು ಇರಿತಕ್ಕೊಳಗಾದವರು.

ಅವರಿಗೆ ಬೇರೆ ಕೋಮಿನ ನಾಲ್ವರು ಯುವಕರ ತಂಡ ಚಾಕುವಿಂದ ಇರಿದಿದೆ ಎಂದು ತಿಳಿದುಬಂದಿದೆ.

ADVERTISEMENT

ಚಾಕು ಇರಿತಕ್ಕೆ ಒಳಗಾದ ಯುವಕನನ್ನು ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳಕ್ಕೆ ಭೇಟಿ ನೀಡಿದ ಸಂಸದ ಬಿ.ವೈ. ರಾಘವೇಂದ್ರ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದರು.

ಇಬ್ಬರು ವಶಕ್ಕೆ

ಶಿಕಾರಿಪುರದಲ್ಲಿ ಚಾಕು ಇರಿತಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ. ಚಾಕು ಇರಿತಕ್ಕೊಳಗಾದ ಯುವಕನ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.