ADVERTISEMENT

ತೀರ್ಥಹಳ್ಳಿಯಲ್ಲಿ ಕಾಗೆಗಳ ಅಸಹಜ ಸಾವು: ಹಕ್ಕಿಜ್ವರದ ಭೀತಿ

​ಪ್ರಜಾವಾಣಿ ವಾರ್ತೆ
Published 8 ಜನವರಿ 2021, 14:23 IST
Last Updated 8 ಜನವರಿ 2021, 14:23 IST
ತೀರ್ಥಹಳ್ಳಿ ಪಟ್ಟಣದ ಸಮೀಪದ ಮೇಲಿನಕುರುವಳ್ಳಿಯಲ್ಲಿ ಶುಕ್ರವಾರ ಅಸಹಜವಾಗಿ ಕಾಗೆಗಳು ಮೃತಪಟ್ಟಿದ್ದು, ಪಶು ವೈದ್ಯಕೀಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸತ್ತ ಕಾಗೆಗಳನ್ನು ತೆರವುಗೊಳಿಸಿದರು
ತೀರ್ಥಹಳ್ಳಿ ಪಟ್ಟಣದ ಸಮೀಪದ ಮೇಲಿನಕುರುವಳ್ಳಿಯಲ್ಲಿ ಶುಕ್ರವಾರ ಅಸಹಜವಾಗಿ ಕಾಗೆಗಳು ಮೃತಪಟ್ಟಿದ್ದು, ಪಶು ವೈದ್ಯಕೀಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸತ್ತ ಕಾಗೆಗಳನ್ನು ತೆರವುಗೊಳಿಸಿದರು   

ತೀರ್ಥಹಳ್ಳಿ: ಪಟ್ಟಣ ಸಮೀಪದ ಮೇಲಿನಕುರುವಳ್ಳಿಯಲ್ಲಿ ಕಾಗೆಗಳು ಅಸಹಜವಾಗಿ ಮೃತಪಟ್ಟಿರುವುದು ಶುಕ್ರವಾರ ಪತ್ತೆಯಾಗಿದೆ.

ಮೇಲಿನಕುರುವಳ್ಳಿಯ ಹೆದ್ದಾರಿ ಪಕ್ಕದಲ್ಲಿ ಕಾಗೆಗಳು ಸತ್ತು ಬಿದ್ದಿರುವುದನ್ನು ಗಮನಿಸಿದ ಸಾರ್ವಜನಿಕರು ಪಶು ವೈದ್ಯಕೀಯ ಇಲಾಖೆಯ ಗಮನಕ್ಕೆ ತಂದಿದ್ದಾರೆ.

ಸ್ಥಳಕ್ಕೆ ಬಂದ ಇಲಾಖೆ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸತ್ತ ಕಾಗೆಗಳನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲು ಕ್ರಮ ತೆಗೆದುಕೊಂಡಿದ್ದಾರೆ. ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಕಾರಣ ಕುರುವಳ್ಳಿಯಲ್ಲಿ ಅಸಹಜವಾಗಿ ಕಾಗೆಗೆಳು ಸತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.