ADVERTISEMENT

ಕೃಷಿ ವಿ.ವಿ ಅಧಿಕಾರಿ ಎಸಿಬಿ ಬಲೆಗೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2021, 5:08 IST
Last Updated 5 ಡಿಸೆಂಬರ್ 2021, 5:08 IST

ಪ್ರಜಾವಾಣಿ ವಾರ್ತೆ

ಶಿವಮೊಗ್ಗ: ಕಾರಿನ ಬಾಡಿಗೆ ಹಣ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೃಷಿ ವಿಶ್ವವಿದ್ಯಾಲಯದ ಹಣಕಾಸು ವಿಭಾಗದ ಅಧಿಕಾರಿ ಗಣೇಶಪ್ಪ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಇಲ್ಲಿಯ ಕೃಷಿ ವಿಶ್ವವಿದ್ಯಾಲಯಕ್ಕೆ ಗುತ್ತಿಗೆ ಆಧಾರದಲ್ಲಿ ಬಾಡಿಗೆ ಬಿಟ್ಟಿದ್ದಕಾರಿನ ಚಾಲಕನಿಗೆ ಬಾಡಿಗೆ ಹಣ ( ₹ 1 ಲಕ್ಷ) ವನ್ನು ನೀಡಲು ಗಣೇಶಪ್ಪ ₹ 5 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ವಾಹನ ಚಾಲಕ ಎಸಿಬಿಗೆ ದೂರು ನೀಡಿದ್ದರು.

ADVERTISEMENT

ಎಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಸಿಬಿ ಡಿವೈಎಸ್‌ಪಿ ಲೋಕೇಶ್ ನೇತೃತ್ವದಲ್ಲಿ ದಾಳಿ
ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.