ADVERTISEMENT

ಅಪಘಾತ: ತಂದೆ, ಮಕ್ಕಳ ಸಾವು

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2021, 3:05 IST
Last Updated 18 ನವೆಂಬರ್ 2021, 3:05 IST

ಶಿರಾಳಕೊಪ್ಪ: ಪಟ್ಟಣದ ಹಿರೇಕೆರೂರು ರಸ್ತೆಯಲ್ಲಿ ಮಂಗಳವಾರ ರಾತ್ರಿ ಬೈಕ್‌ ಹಾಗೂ ಮಿನಿ ಲಾರಿ ನಡುವೆ ಡಿಕ್ಕಿಯಾಗಿ ತಂದೆ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತ್ನಿ ಸ್ಥಿತಿ ಚಿಂತಾಜನಕವಾಗಿದೆ.

ಸೊರಬ ತಾಲ್ಲೂಕಿನ ಗುಂಜನೂರು ಗ್ರಾಮದ ರಾಮಚಂದ್ರ (40) ಮಕ್ಕಳಾದ ಶಶಾಂಕ್ (11) ಹಾಗೂ ಆದರ್ಶ(5) ಮೃತರು.

ಸೊರಬ ತಾಲ್ಲೂಕಿನ ಚಿಕ್ಕಜಂಬೂರಿನಲ್ಲಿ ವಿಶೇಷ ದೀಪಾವಳಿ ಹಬ್ಬಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡ ರಾಮಚಂದ್ರ ಅವರ ಪತ್ನಿ ಭಾಗ್ಯ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಾಳಕೊಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.