ತೀರ್ಥಹಳ್ಳಿ: ತಾಲ್ಲೂಕಿನ ಆಗುಂಬೆ ಘಾಟಿ ರಸ್ತೆಯಲ್ಲಿ ಗುರುವಾರ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯಲ್ಲಿ ಸಿಕ್ಕಿಕೊಂಡಿದೆ.
ಘಾಟಿಯ 7ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಚಾಲಕಜಾಣ್ಮೆ ತೋರಿದ ಕಾರಣ ಜೀವ ಉಳಿದಿದೆ.
ಭತ್ತ ಸಾಗಿಸುತ್ತಿದ್ದ ಲಾರಿ ತಿರುವಿನಲ್ಲಿ ನಿಯಂತ್ರಣ ತಪ್ಪಿತ್ತು. ಸ್ವಲ್ಪ ಮುಂದೆ ಹೋಗಿದ್ದರೂ ಲಾರಿ ಪ್ರಪಾತಕ್ಕೆ ಬೀಳುತ್ತಿತ್ತು. ತಡೆ ಗೋಡೆಯಲ್ಲಿ ಸಿಕ್ಕ ಲಾರಿಯನ್ನು ಹೊರ ತೆಗೆಯಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.