ನ್ಯಾಮತಿ: ತಾಲ್ಲೂಕಿನ ಶಿವಮೊಗ್ಗ- ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಮಂಗಳವಾರ ಡಿಕ್ಕಿ ಸಂಭವಿಸಿದೆ.
ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಪುಷ್ಪಾ ಕಾನ್ವೆಂಟ್ ಶಾಲೆಯ ರೆವಿಡೆಂಟ್ ಫಾದರ್ ಅಂಟೋನಿ ಪೀಟರ್ (60) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರು ಚಾಲಕ ಸ್ಟೀಫನ್ ಅವರ ಕಾಲುಗಳಿಗೆ ಗಂಭೀರ ಪೆಟ್ಟಾಗಿದೆ.
ಶಿವಮೊಗ್ಗದಿಂದ ಕಾರಿನಲ್ಲಿ ಅಂಟೋನಿ ಮತ್ತು ಸ್ಟೀಫನ್ ಅವರು ಶಿಕಾರಿಪುರಕ್ಕೆ ಹೋಗುತ್ತಿದ್ದರು. ಈ ವೇಳೆ ಶಿಕಾರಿಪುರದಿಂದ ಎದುರುಗಡೆ ಬಂದ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಪರಸ್ಪರ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ.
ಸ್ಟೀಫನ್ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ನ್ಯಾಮತಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಎನ್.ಎಸ್.ರವಿ ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.