ADVERTISEMENT

ಅಪಘಾತ: ವಿದ್ಯಾರ್ಥಿ ಸಾವು

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2021, 4:08 IST
Last Updated 25 ನವೆಂಬರ್ 2021, 4:08 IST

ಕುಂಸಿ: ಹಳೆಕುಂಸಿಯ ಬಳಿ ಕಾರೊಂದು ಶಾಲಾ ವಿದ್ಯಾರ್ಥಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾನೆ.

ಸಮೀಪದ ಹಳೆಕುಂಸಿಯ ಬಳಿಯ 3ನೇ ತರಗತಿ ವಿದ್ಯಾರ್ಥಿ ವೇಣು ಗೋಪಾಲ್(9) ಮೃತಪಟ್ಟ ಬಾಲಕ.

ಸಂಜೆ ಶಾಲೆ ಮುಗಿಸಿಕೊಂಡು ಕನಕನಗರದ ಮನೆಗೆ ರಸ್ತೆಯ ಎಡಭಾಗದಿಂದ ಬರುತ್ತಿರುವಾಗ ಸಾಗರ ಕಡೆಯಿಂದ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಾಲಕನ ಮೇಲೆ ಹರಿದಿದೆ. ಇದರಿಂದ ಬಾಲಕನ ಕಾಲುಗಳು ಸಂಪೂರ್ಣ ಜಖಂ ಆಗಿದ್ದು, ಬಾಲಕನ ತಲೆಯ ಹಿಂಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದೆ. ತೀವ್ರವಾಗಿ ಅಸ್ವಸ್ಥಗೊಂಡ ಬಾಲಕನನ್ನು ಶಿವಮೊಗ್ಗದ
ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆಗೆ ಸ್ಪಂದಿಸದೇ ರಾತ್ರಿ ಬಾಲಕ ಸಾವನ್ನಪ್ಪಿದ್ದಾನೆ. ಕಾರಿನ ಚಾಲಕ ಪರಾರಿಯಾಗಿದ್ದಾನೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.