ಆನಂದಪುರ: ಸಮೀಪದ ಕಣ್ಣೂರು ಗ್ರಾಮದಲ್ಲಿ ಶನಿವಾರ ಮನೆಯೊಂದರಲ್ಲಿ ಸ್ಫೋಟಗೊಂಡಿದ್ದು, ಗೋಡೆ, ಹೆಂಚಿಗೆ ಹಾನಿಯಾಗಿದೆ.
ಕಣ್ಣೂರು ಗ್ರಾಮದ ಸಂಗಿ ಕರಿಯಪ್ಪ ಅವರ ಬಚ್ಚಲು ಮನೆಯಲ್ಲಿ ಆಕಸ್ಮಿಕವಾಗಿ ಸ್ಫೋಟವಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಸ್ಫೋಟದ ಶಬ್ದ ಕೇಳಿದ ಸ್ಥಳೀಯರು ನೋಡಿ ಪೋಲಿಸರಿಗೆ ಮಾಹಿತಿ ನೀಡಿದರು. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.