ADVERTISEMENT

‘ಪುನೀತ್‍ ಅಂತಃಕರಣವಿದ್ದ ನಟ’

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2021, 6:48 IST
Last Updated 2 ನವೆಂಬರ್ 2021, 6:48 IST
ಶಿವಮೊಗ್ಗ ಟ್ಯಾಂಕ್ ಮೊಹಲ್ಲಾದ ಜೈಭುವನೇಶ್ವರಿ ಸದ್ಭಾವನಾ ಕನ್ನಡ ಯುವಕರ ಸಂಘದಿಂದ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತ ಎನ್. ರವಿಕುಮಾರ್ ಟೆಲೆಕ್ಸ್ ಪುನೀತ್‍ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಶಿವಮೊಗ್ಗ ಟ್ಯಾಂಕ್ ಮೊಹಲ್ಲಾದ ಜೈಭುವನೇಶ್ವರಿ ಸದ್ಭಾವನಾ ಕನ್ನಡ ಯುವಕರ ಸಂಘದಿಂದ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತ ಎನ್. ರವಿಕುಮಾರ್ ಟೆಲೆಕ್ಸ್ ಪುನೀತ್‍ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.   

ಶಿವಮೊಗ್ಗ: ಪುನೀತ್‍ ರಾಜ್‌ಕುಮಾರ್ ಅಪ್ರತಿಮ ನಟ. ಅದಕ್ಕೂ ಮಿಗಿಲಾಗಿ ಅವರೊಬ್ಬ ಮಾನವೀಯ ಅಂತಃಕರಣವುಳ್ಳ ಪರಿಪೂರ್ಣ ವ್ಯಕ್ತಿಯಾಗಿದ್ದರು ಎಂದು ಪತ್ರಕರ್ತ ಎನ್.ರವಿಕುಮಾರ್ ಟೆಲೆಕ್ಸ್ ಸ್ಮರಿಸಿದರು.

ಇಲ್ಲಿನ ಟ್ಯಾಂಕ್ ಮೊಹಲ್ಲಾದ ಜೈಭುವನೇಶ್ವರಿ ಸದ್ಭಾವನಾ ಕನ್ನಡ
ಯುವಕರ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಹಾಗೂ ಪುನೀತ್‍ ರಾಜ್‌ಕುಮಾರ್ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡ ಚಿತ್ರರಂಗದ ಶ್ರೇಷ್ಠ ನಟರಾಗಿದ್ದ ಪುನೀತ್ ತಮ್ಮೊಳಗಿನ ಮಾನವೀಯ ನಡೆಯಿಂದ ಜಗತ್ತಿನಾದ್ಯಂತ ಅಭಿಮಾನಿಗಳನ್ನು ಗಳಿಸಿದ್ದರು. ತಂದೆಯ ಪ್ರತಿರೂಪದಂತೆ ವಿನಯವಂತಿಕೆ, ನಿಷ್ಮಕಲ್ಮಷ ಪ್ರೀತಿ, ವಿಶ್ವಾಸಗಳಿಂದ ಜನಮಾನಸದಲ್ಲಿ ಉಳಿದಿದ್ದರು ಎಂದರು.

ADVERTISEMENT

ತಮ್ಮ ದುಡಿಮೆಯ ಒಂದು ಪಾಲನ್ನು ಈ ಸಮಾಜದ ನಿರ್ಗತಿಕರಿಗೆ, ಅನಾಥ ಮಕ್ಕಳಿಗೆ ಮೀಸಲಾಗಿಟ್ಟದ್ದ ಪುನೀತ್ ಅವರು ಯಾವ ಪ್ರತಿಫಲದ ಅಪೇಕ್ಷೆಯಿಲ್ಲದೆ ನಿರ್ಮಲವಾಗಿ ಸೇವೆಗೈಯುತ್ತಿದ್ದರು. ಇದು ಅವರಲ್ಲಿನ ಮಾನವೀಯತೆಗೆ ಸಾಕ್ಷಿ. ಅವರ ಅಕಾಲಿಕ ನಿಧನದಿಂದ ಸಮಾಜ ಪರಿಪೂರ್ಣ ಜೀವವೊಂದನ್ನು ಕಳೆದುಕೊಂಡು ಬಡವಾದಂತಾಗಿದೆ ಎಂದು ಹೇಳಿದರು.

‘ಪುನೀತ್ ನಿಧನದಿಂದ ಕನ್ನಡ ಚಿತ್ರರಂಗ ದೊಡ್ಡ ನಷ್ಟವನ್ನು ಅನುಭವಿಸುವಂತಾಗಿದೆ. ಅವರ ಬದುಕಿನ ಆದರ್ಶಗಳನ್ನು ನಾವು ಅಳವಡಿಸಿಕೊಂಡಾಗ ಅವರ ಆತ್ಮಕ್ಕೆ ನಿಜ ಗೌರವ ಸಲ್ಲಿಸದಂತಾಗುತ್ತದೆ’ ಎಂದು ಪ್ರಾರ್ಥಿಸಿದರು.

ಸಂಘದ ಅಧ್ಯಕ್ಷರಾದ ಸುರೇಶ್, ಮುಖಂಡರಾದ ಸೀತಾರಾಂ, ಲಕ್ಷ್ಮಣ,
ಮಂಜುನಾಥ್, ಪ್ರೇಮ್, ಮೇಘರಾಜ್, ಭೋಜರಾಜ, ಸಿ.ಬಿ ಚಂದ್ರಶೇಖರ್, ಅವಿನಾಶ್, ಆದರ್ಶ, ರಾಮಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.