ADVERTISEMENT

ಸಕ್ರೆಬೈಲಿಗೆ ನಟ ಪುನೀತ್‌ ರಾಜ್‌ಕುಮಾರ್ ಭೇಟಿ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2021, 4:12 IST
Last Updated 2 ಸೆಪ್ಟೆಂಬರ್ 2021, 4:12 IST
ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ಭೇಟಿದ್ದ ನಟ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳನ್ನು ಭೇಟಿಯಾದರು
ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ಭೇಟಿದ್ದ ನಟ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳನ್ನು ಭೇಟಿಯಾದರು   

ಶಿವಮೊಗ್ಗ: ಸಾಕ್ಷ್ಯಚಿತ್ರದ ಚಿತ್ರೀಕರಣದ ಕಾರಣ ಬುಧವಾರ ನಟ ಪುನೀತ್ ರಾಜ್‌ಕುಮಾರ್ ಅವರು ಸಕ್ರೆಬೈಲು ಆನೆ ಬಿಡಾರಕ್ಕೆ ಭೇಟಿ ನೀಡಿದ್ದರು. ಅವರು ಬಿಡಾರಕ್ಕೆ ಬಂದಿರುವ ವಿಷಯ ತಿಳಿಯುತ್ತಿದ್ದಂತೆ ಅಭಿಮಾನಿಗಳು ಆನೆ ಬಿಡಾರದ ಬಳಿ ಜಮಾಯಿಸಿದ್ದರು.

ಬಿಡಾರದ ಕ್ರಾಲ್ ಪ್ರದೇಶದಲ್ಲಿ ಚಿತ್ರೀಕರಣ ನಡೆಯಿತು.

ಜನರ ಪ್ರವೇಶ ನಿಷಿದ್ಧ: ಚಿತ್ರೀಕರಣ ನಡೆಯುತ್ತಿದ್ದ ಕಾರಣಕ್ಕೆ ಕ್ರಾಲ್ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಅರಣ್ಯಾಧಿಕಾರಿಗಳು, ಬಿಡಾರದ ಸಿಬ್ಬಂದಿ ಮತ್ತು ಚಿತ್ರೀಕರಣದ ತಂಡಕ್ಕೆ ಮಾತ್ರ ಕ್ರಾಲ್ ಒಳಗೆ ಬಿಡಲಾಯಿತು.

ADVERTISEMENT

ಅಭಿಮಾನಿಗಳ ಭೇಟಿಯಾದ ಅಪ್ಪು: ಚಿತ್ರೀಕರಣದ ಬಿಡುವಿನ ವೇಳೆ ಪುನೀತ್ ರಾಜ್‌ಕುಮಾರ್ ಅವರು ಕ್ರಾಲ್ ಪ್ರದೇಶದಿಂದ ಹೊರಗೆ ಬಂದು ಅಭಿಮಾನಿಗಳನ್ನು ಭೇಟಿಯಾದರು. ಅಭಿಮಾನಿಗಳಿಗೆ ಕೈ ಮುಗಿದ ಅವರು ಫೋಟೊ ಕ್ಲಿಕ್ಕಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.