ಭದ್ರಾವತಿ: ನಗರದ ಬೈಪಾಸ್ ರಸ್ತೆಯ ಬಳ್ಳಾಪುರದ ಪೆಟ್ರೋಲ್ ಬಂಕ್ ಒಳಗೆ ಸೋಮವಾರ ಅವಿತುಕೊಂಡಿದ್ದ ಹೆಬ್ಬಾವು ಸೆರೆ ಹಿಡಿಯುವಲ್ಲಿ ಸ್ನೇಕ್ ಅಪ್ಪು ಮತ್ತು ತಂಡದವರು ಯಶಸ್ವಿಯಾಗಿದ್ದಾರೆ.
ಪೆಟ್ರೋಲ್ ಬಂಕ್ ಸಿಬ್ಬಂದಿ ಕರೆ ಮಾಡಿದ ತಕ್ಷಣ ಉಜ್ಜನಿಪುರ ನಿವಾಸಿ ಸ್ನೇಕ್ ಅಪ್ಪು ಮತ್ತು ತಂಡದವರು ಸ್ಥಳಕ್ಕೆ ಆಗಮಿಸಿ, 8 ಅಡಿ ಉದ್ದ ಹಾಗೂ 13.5 ಕೆ.ಜಿ. ತೂಕದ ಹೆಬ್ಬಾವು ಸೆರೆ ಹಿಡಿದಿದ್ದಾರೆ. ನಂತರ ಸುರಕ್ಷಿತವಾಗಿ ಹತ್ತಿರದ ಉಂಬ್ಳೆಬೈಲು ಅರಣ್ಯಕ್ಕೆ ಬಿಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.