ADVERTISEMENT

ಯಡಿಯೂರಪ್ಪ ಭೇಟಿ ಮಾಡಿದ ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2021, 13:43 IST
Last Updated 29 ಆಗಸ್ಟ್ 2021, 13:43 IST
ಶಿಕಾರಿಪುರದಲ್ಲಿ ಭಾನುವಾರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಮಾಡಿದರು
ಶಿಕಾರಿಪುರದಲ್ಲಿ ಭಾನುವಾರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಮಾಡಿದರು   

ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಭಾನುವಾರ ಭೇಟಿ ಮಾಡಿದರು.

ಪಟ್ಟಣ ಸಮೀಪದ ಕುಮದ್ವತಿ ಕೇಂದ್ರೀಯ ಶಾಲೆ ಸಮೀಪದ ಅತಿಥಿ ಗೃಹದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಆರಗ ರಾಜ್ಯದ ವಿವಿಧ ಅಪರಾಧ ಚಟುವಟಿಕೆ ಕುರಿತು ಚರ್ಚೆ ನಡೆಸಿದರು.

ಸಂಸದ ಬಿ.ವೈ. ರಾಘವೇಂದ್ರ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಇದ್ದರು.

ADVERTISEMENT

ಯಡಿಯೂರಪ್ಪ ಭೇಟಿಗೂ ಮುನ್ನ ಪಟ್ಟಣದ ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಗೃಹ ಸಚಿವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ಅವರು ಜಿಲ್ಲೆಗೆ ಆಗಮಿಸಿರುವುದರಿಂದ ಅವರನ್ನು ಮಾತನಾಡಿಸಲು ಬಂದಿದ್ದೆ. ಇದು ಸೌಜನ್ಯದ ಭೇಟಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.