ADVERTISEMENT

ವಿದ್ಯುತ್ ಸ್ಪರ್ಶಿಸಿ ಅಡಿಕೆ ಗೊನೆಗಾರ ಸಾವು

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2025, 4:20 IST
Last Updated 3 ನವೆಂಬರ್ 2025, 4:20 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ತೀರ್ಥಹಳ್ಳಿ: ಅಡಿಕೆ ಗೊನೆ ಕೀಳುವಾಗ ಆಕಸ್ಮಿಕವಾಗಿ ದೋಟಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕೃಷಿ ಕಾರ್ಮಿಕ ಮೃತಪಟ್ಟ ಘಟನೆ ಬಸವಾನಿ‌ ಸಮೀಪದ ಲಕ್ಷ್ಮೀಪುರ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.

ADVERTISEMENT

ಲಕ್ಷ್ಮೀಪುರ ರೈತ ಸುಂದರೇಶ್ ಅವರಿಗೆ ಸೇರಿದ ಅಡಿಕೆ ತೋಟದಲ್ಲಿ ಗೊನೆ ಕೀಳುವಾಗ ಈ ದುರ್ಘಟನೆ ಸಂಭವಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ದೋರಗಲ್ಲು ಗ್ರಾಮದ ಸತೀಶ್ (50) ಮೃತ ದುದೈವಿ. ಸತೀಶ್ ಈ ಭಾಗದಲ್ಲಿ ಹಲವು ವರ್ಷಗಳಿಂದ ಗೊನೆಗಾರರಾಗಿ ಕೆಲಸ ಮಾಡುತ್ತಿದ್ದು.

ಅದರಂತೆಯೇ ಶನಿವಾರ ಕೂಡ ಕೆಲಸಕ್ಕೆ ಆಗಮಿಸಿದ್ದರು. ಅವರಿಗೆ ಪತ್ನಿ , ಇಬ್ಬರು ಪುತ್ರಿಯರು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.