ADVERTISEMENT

ಭದ್ರಾವತಿ | ತಂದೆ ಮಾಡಿದ ಸಾಲಕ್ಕೆ ಮಗನ ಮೇಲೆ ಹಲ್ಲೆ: ಯುವಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2024, 16:11 IST
Last Updated 23 ಆಗಸ್ಟ್ 2024, 16:11 IST
ಸ್ಟೀವನ್
ಸ್ಟೀವನ್   

ಭದ್ರಾವತಿ: ತಂದೆ ಮಾಡಿದ ಸಾಲಕ್ಕೆ ಮಗನ ಮೇಲೆ ಹಲ್ಲೆ ಮಾಡಲಾಗಿದ್ದು, ಮನನೊಂದ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಪೇಪರ್ ಟೌನ್‌ನಲ್ಲಿ ಬುಧವಾರ ನಡೆದಿದೆ.

ಸ್ಟೀವನ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಪೇಪರ್ ಟೌನ್ ನಿವಾಸಿ ಜೋಸೆಫ್ ಪರಶುರಾಮ್ ಅವರ ಬಳಿ ₹ 2 ಲಕ್ಷ ಸಾಲ ಪಡೆದಿದ್ದರು. ಸಾಲ ಪಡೆದುಕೊಂಡು ತೀರಿಸಲಾಗದೇ ಜೋಸೆಫ್ ಮನೆ ಬಿಟ್ಟು ಹೋಗಿದ್ದರು.

ಸಾಲ ವಸೂಲಿಗಾಗಿ ಮಗ ಸ್ಟೀವನ್‌ನನ್ನು ಕರೆದುಕೊಂಡು ಹೋದ ಪರಶುರಾಮ್‌ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಶುಕ್ರವಾರ ಪೇಪರ್ ಟೌನ್ ಠಾಣೆಯಲ್ಲಿ ಪ್ರಕರಣ  ದಾಖಲಿಸಲಾಗಿದೆ.

ADVERTISEMENT

ಜಿಲ್ಲಾಧಿಕಾರಿ ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಪರಶುರಾಮ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.