ADVERTISEMENT

ಸ್ವಾಮಿನಾಥ ಗೋಪಾಲ್ ರಾವ್, ಜಗದೀಶ್‌ಗೆ ಮಾನಸ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 19:44 IST
Last Updated 15 ಫೆಬ್ರುವರಿ 2021, 19:44 IST
ಸ್ವಾಮಿನಾಥ ಗೋಪಾಲರಾವ್, ಸ್ವಾಮಿನಾಥ
ಸ್ವಾಮಿನಾಥ ಗೋಪಾಲರಾವ್, ಸ್ವಾಮಿನಾಥ   

ಶಿವಮೊಗ್ಗ: ಇಲ್ಲಿನ ಮಾನಸ ಟ್ರಸ್ಟ್‌ ಡಾ.ಕಟೀಲ್ ಅಶೋಕ್ ಪೈ ಸ್ಮರಣಾರ್ಥ ನೀಡುವ ಮಾನಸ ರಾಷ್ಟ್ರೀಯ ಪ್ರಶಸ್ತಿಗೆ ಬೆಂಗಳೂರಿನ ಮನೋವೈದ್ಯ ಡಾ.ಸ್ವಾಮಿನಾಥ ಗೋಪಾಲರಾವ್, ನಿಮ್ಹಾನ್ಸ್ ಪ್ರಾಧ್ಯಾಪಕ ಡಾ.ಜಗದೀಶ್ ತೀರ್ಥಹಳ್ಳಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ತಲಾ ₹ 75 ಸಾವಿರ ನಗದು, ಫಲಕ ಒಳಗೊಂಡಿದೆ. ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿಫೆ.20ರಂದು ಸಂಜೆ 5.30ಕ್ಕೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುವುದು. ಬರಹಗಾರ ಜಯಂತ್ ಕಾಯ್ಕಿಣಿ ಕಾರ್ಯಕ್ರಮ ಉದ್ಘಾಟಿಸುವರು ಎಂದು ಟ್ರಸ್ಟ್‌ ನಿರ್ದೇಶಕ ಡಾ.ರಾಜೇಂದ್ರ ಚೆನ್ನಿ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT