ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯ ದಿಂದ ಬೆಂಗಳೂರಿಗೆ ನೀರು ಹರಿಸುವ ಸರ್ಕಾರದ ನಿರ್ಧಾರ ಖಂಡಿಸಿ ಶರಾವತಿ ಉಳಿಸಿ ಹೋರಾಟ ಒಕ್ಕೂಟ ಇದೇ 10ರಂದು ಶಿವಮೊಗ್ಗ ಜಿಲ್ಲಾ ಬಂದ್ಗೆ ಕರೆ ನೀಡಿದೆ.
ಸಾಹಿತಿಗಳು, ವಿದ್ಯಾರ್ಥಿಗಳು, ವ್ಯಾಪಾರಿಗಳು, ನಾಗರಿಕರು, ವಿವಿಧ ಸಂಘ–ಸಂಸ್ಥೆಗಳು, ಸಂಘಟನೆಗಳ ಮುಖಂಡರುಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ವಿವಿಧ ಪಕ್ಷಗಳ ಸ್ಥಳೀಯ ಘಟಕಗಳು ಬೆಂಬಲ ನೀಡಿವೆ. ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಯೋಜನೆಯ ವಿಸ್ತೃತ ವರದಿ ಸಿದ್ಧಪಡಿಸುವಂತೆ ಸೂಚಿಸಿದ ನಂತರ ಜಿಲ್ಲೆಯ ಎಲ್ಲೆಡೆ ಪ್ರತಿಭಟನೆ, ಖಂಡನಾ ಸಭೆಗಳು ನಡೆದಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.