ಶಿವಮೊಗ್ಗ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಿಗಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಬಾಸ್ಕೆಟ್ಬಾಲ್ ಪಂದ್ಯದಲ್ಲಿ ಶಿವಮೊಗ್ಗ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ತಂಡ ಪ್ರಥಮ ಸ್ಥಾನ ಪಡೆದಿದೆ. ಈ ತಂಡವು ಮಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ.
ಸಾಗರ ದೈಹಿಕ ಶಿಕ್ಷಣ ಶಿಕ್ಷಕರ ಎದುರಾಳಿ ತಂಡದ ವಿರುದ್ಧ ಶಿವಮೊಗ್ಗ ತಾಲ್ಲೂಕಿನ ದೈಹಿಕ ಶಿಕ್ಷಣ ಶಿಕ್ಷಕರಾದ ಮೈಕಲ್ ಕಿರಣ್, ಎಚ್. ಎನ್.ದೇವರಾಜ್ ಅವರು ಉತ್ತಮ ಪ್ರದರ್ಶನ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.