ಶಿವಮೊಗ್ಗ: ಕೃಷಿ ಪೂರಕ ವಾಣಿಜ್ಯ ಮಳಿಗೆಗಳು ತೆರೆಯಲು ಅವಕಾಶ ನೀಡಲಾಗುವುದು. ಇಲ್ಲಿನ ರೈತರು ಬೆಳೆದ ಹಣ್ಣುಗಳನ್ನು ಹೊರ ರಾಜ್ಯಗಳಿಗೆ ಸಾಗಿಸಲು ಅನುಮತಿ ಪಡೆಯುವ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಭರವಸೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರೈತರು, ಜನ ಪ್ರತಿನಿಧಿಗಳು, ವರ್ತಕರ ಜತೆ ನಡೆದ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು.
ಕೊರೊನಾ ನಿರ್ಬಂಧಗಳು ಕೃಷಿ ಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಾರದು. ಖರೀದಿದಾರರು ಇಲ್ಲದೇ ನಾಶವಾಗುತ್ತಿರುವ ಹಣ್ಣಿನ ಬೆಳೆಗಳಿಗೆ ಮಾರುಕಟ್ಟೆ ದೊರಕಿಸಬೇಕು. ಶುಂಠಿ ಬೆಳೆ ಸಂರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಸೂಚಿಸಿದರು.
ಜಿಲ್ಲೆಯಲ್ಲಿ 20 ಸಾವಿರ ಟನ್ ಫೈನಾಪಲ್ ಬೆಳೆ ನಾಶವಾಗುತ್ತಿದೆ.ಉತ್ತರ ಭಾರತದಲ್ಲಿ ಅನಾನಸ್ ಕಾರ್ಖಾನೆಗಳು ಮುಚ್ಚಿದ ಪರಿಣಾಮಅನಾನಸ್ ಮಾರಾಟಕ್ಕೆ ತೊಂದರೆಯಾಗಿದೆ.ದೆಹಲಿ, ರಾಜಸ್ಥಾನ ಸೇರಿದಂತೆ ಉತ್ತರದ ರಾಜ್ಯಗಳಲ್ಲಿ ಅನಾನಸ್ ಕಾರ್ಖಾನೆಗಳು ತೆರೆದರೆ ಅನುಕೂಲವಾಗುತ್ತದೆ. ಕಲ್ಲಂಗಡಿ ಬೆಳೆಗಾರರು ಸಂಕಷ್ಟದಲ್ಲಿ ಇದ್ದಾರೆ. ಹೊರ ರಾಜ್ಯಗಳಿಗೆ ಕಳುಹಿಸುವ ವ್ಯವಸ್ಥೆಯಾದರೆ ಅನುಕೂಲವಾಗುತ್ತದೆ ಎಂದು ರೈತರು ಮನವಿ ಮಾಡಿದ್ದಾರೆ. ಎಲ್ಲ ಅಂಶಗಳನ್ನೂ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದರು.
ಕೃಷಿಗೆ ಪೂರಕವಾದ ಪಂಪ್ಸೆಟ್, ಪೈಪ್, ಎಲೆಕ್ಟ್ರಿಕಲ್ ಅಂಗಡಿಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗುವುದು. ಸಾಮಾಜಿಕ ಅಂತರ ಕಾಪಾಡಿಕೊಂಡು ಎಲ್ಲಾಚಟುವವಟಿಕೆ ನಡೆಸಲು ಜಿಲ್ಲಾಡಳಿತ ಅನುಮತಿ ನೀಡಬೇಕು. ರೈತರೂ ಸೇರಿದಂತೆ ಎಲ್ಲರೂ ನಿಯಮ ಪಾಲಿಸಬೇಕು ಎಂದು ಸೂಚಿಸಿದರು.
ಟ್ರ್ಯಾಕ್ಟರ್,ಕೃಷಿ ಯಂತ್ರಗಳ ದುರಸ್ತಿ, ಪಂಪ್ಸೆಟ್ ದುರಸ್ತಿಗೆ ಅಗತ್ಯವಾದಮೆಕಾನಿಕ್ ಶಾಪ್ಗಳನ್ನುತೆರೆಯಲು ಸೂಚಿಸಲಾಗಿದೆ. ಕೃಷಿ ಉತ್ಪನ್ನಗಳ ಮಾರಾಟಕ್ಕೆಎಪಿಎಂಸಿ ಮಾರುಕಟ್ಟೆಗಳನ್ನುಮುಕ್ತವಾಗಿಸಲುಸೂಚಿಸಲಾಗಿದೆ. ಮುಂಗಾರು ಬಿತ್ತನೆಗೆಅಗತ್ಯವಾದಬಿತ್ತನೆ ಬೀಜ, ರಸಗೊಬ್ಬರದಸಂಗ್ರಹಿಸಲಾಗಿದೆಎಂದುವಿವರ ನೀಡಿದರು.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಎಚ್.ಹಾಲಪ್ಪ, ಅರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.