ADVERTISEMENT

ಭದ್ರಾವತಿ: ಚುನಾವಣೆಯ ಮಹತ್ವ ಸಾರಿದ ಶಾಲಾ ಚುನಾವಣೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2023, 16:03 IST
Last Updated 8 ಜುಲೈ 2023, 16:03 IST
ಭದ್ರಾವತಿ ನಗರದ ಅಪ್ಪರ್ ವೃತ್ತ ಅನನ್ಯ ಶಾಲೆಯ ವಿದ್ಯಾರ್ಥಿಗಳು ವಿದ್ಯಾರ್ಥಿ ಚುನಾವಣೆಯಲ್ಲಿ ಪಾಲ್ಗೊಳ್ಳಲು ಸಜ್ಜಾಗಿದ್ದರು
ಭದ್ರಾವತಿ ನಗರದ ಅಪ್ಪರ್ ವೃತ್ತ ಅನನ್ಯ ಶಾಲೆಯ ವಿದ್ಯಾರ್ಥಿಗಳು ವಿದ್ಯಾರ್ಥಿ ಚುನಾವಣೆಯಲ್ಲಿ ಪಾಲ್ಗೊಳ್ಳಲು ಸಜ್ಜಾಗಿದ್ದರು   

ಭದ್ರಾವತಿ: ವಿದ್ಯಾರ್ಥಿಗಳಿಗೆ ಚುನಾವಣೆಯ ಮಹತ್ವ ಹಾಗೂ ಪ್ರಕ್ರಿಯೆಯನ್ನು ತಿಳಿಸಿಕೊಡುವ ಉದ್ದೇಶದಿಂದ ನಗರದ ಅಪ್ಪರ್ ವೃತ್ತದಲ್ಲಿರುವ ಅನನ್ಯ ಶಾಲೆಯಲ್ಲಿ ಸಂಸದೀಯ ಚುನಾವಣೆಯ ಮಾದರಿಯಲ್ಲಿ ಶಾಲಾ ಚುನಾವಣೆ ನಡೆಸಲಾಯಿತು. 

ಚುನಾವಣೆ ಘೋಷಣೆ, ನಾಮಪತ್ರ ಸಲ್ಲಿಕೆ, ಪರಿಶೀಲನೆ, ವಾಪಸ್ ಪಡೆಯುವುದು, ಮತದಾನ ಹಾಗೂ ಫಲಿತಾಂಶ ಘೋಷಣೆ ಮಾಡುವ ಪ್ರಕ್ರಿಯೆಗಳನ್ನು ನಡೆಸಲಾಯಿತು. ಮೊಬೈಲ್ ಆ್ಯಪ್ ಮೂಲಕ ಚುನಾವಣೆ ನಡೆಸಿ, ಡಿಜಿಟಲ್ ತಂತ್ರಜ್ಞಾನದ ಮಹತ್ವವನ್ನು ತಿಳಿಸಲಾಯಿತು. ಚುನಾವಣೆಗೂ ಮುನ್ನ ಅಭ್ಯರ್ಥಿಗಳು ಪ್ರಣಾಳಿಕೆ ಪ್ರಕಟಿಸಿ ವಿವಿಧ ಆಶ್ವಾಸನೆ ನೀಡಿದ್ದರು. 

ಶಾಲಾ ವಿದ್ಯಾರ್ಥಿ ನಾಯಕನ ಸ್ಥಾನಕ್ಕೆ ಜೀವಿತ ಆಯ್ಕೆಯಾದರು. ಮುಖ್ಯ ಚುನಾವಣಾಧಿಕಾರಿಯಾಗಿ ಶಾಲೆಯ ಮುಖ್ಯೋಪಾಧ್ಯಾಯ ಕಲ್ಲೇಶ್ ಕುಮಾರ್, ರಿಟರ್ನಿಂಗ್ ಅಧಿಕಾರಿಯಾಗಿ ದೈಹಿಕ ಶಿಕ್ಷಕ ಎಂ.ಕುಮಾರ್, ಚುನಾವಣಾ ಅಧಿಕಾರಿಗಳಾಗಿ ಸುನಿತಾ, ರಾಧಿಕಾ, ಸಂಗೀತ, ಕಾವ್ಯ, ಭಾರತಿ, ಲತಾ, ಬಿಂದು, ಅಶ್ವಿನಿ ಕಾರ್ಯ ನಿರ್ವಹಿಸಿದರು. ಶಾಲೆಯ ಆಡಳಿತ ಅಧಿಕಾರಿ ವೇಣುಗೋಪಾಲ್ ಮಾರ್ಗದರ್ಶಕರಾಗಿದ್ದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.