ADVERTISEMENT

ಬೈಬಲ್ ಸುಟ್ಟ ಮಹಿಳೆ ವಿರುದ್ಧ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 20 ಮೇ 2020, 14:12 IST
Last Updated 20 ಮೇ 2020, 14:12 IST

ಸಾಗರ: ಇಲ್ಲಿನ ನಗರ ಪೊಲೀಸ್ ಠಾಣೆ ಎದುರು ಕಳೆದ ಭಾನುವಾರ ಬೈಬಲ್ ಗ್ರಂಥಕ್ಕೆ ಬೆಂಕಿ ಹಚ್ಚಿದ ಸಂಬಂಧ ನೆಹರೂ ನಗರ ಬಡಾವಣೆಯ ಎಪಿಪೋನಿಯಾ ಡಿಸೋಜ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಾಲ್ಲೂಕು ಕ್ರೈಸ್ತ ಒಕ್ಕೂಟದ ಪ್ರಮುಖರಾದ ಅಮೃತ್ ರಾಸ್ ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಠಾಣೆ ಎದುರು ಬೈಬಲ್‌ಗೆ ಬೆಂಕಿ ಹಚ್ಚುವ ಮೂಲಕ ಎಪಿಪೋನಿಯಾ ಅವರು ಕ್ರೈಸ್ತ ಧರ್ಮಿಯರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT