ADVERTISEMENT

ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಘರ್ಷಣೆ: ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2021, 17:24 IST
Last Updated 2 ಮಾರ್ಚ್ 2021, 17:24 IST

ಭದ್ರಾವತಿ: ಎರಡು ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮಧ್ಯದ ಘರ್ಷಣೆ ಹಿನ್ನೆಲೆಯಲ್ಲಿ ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ.

ಕನಕ ಮಂಟಪದಲ್ಲಿ ಭಾನುವಾರ ರಾತ್ರಿ ನಡೆದ ಕಬಡ್ಡಿ ಪಂದ್ಯಾವಳಿಯ ನಂತರ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದು ಪರಸ್ಪರ ದೂರು–ಪ್ರತಿದೂರು ದಾಖಲಾಗಿದ್ದವು. ನಂತರ ಸರಣಿ ಪ್ರತಿಭಟನೆಗಳು ನಡೆದಿದ್ದವು.

ಮುಂಜಾಗ್ರತಾ ಕ್ರಮವಾಗಿ 48 ಗಂಟೆಗಳು ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಸಂತೋಷ್‌ಕುಮಾರ್ ಆದೇಶ ಹೊರಡಿಸಿದ್ದಾರೆ. ಹಾಗಾಗಿ, ಮಾರಕಾಸ್ತ್ರ ಹಿಡಿಯುವುದು, ಗುಂ‍ಪುಗೂಡಿ ಪ್ರತಿಭಟನೆ ನಡೆಸುವಂತಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.