ಶಿವಮೊಗ್ಗ: ಮುಖ್ಯಮಂತ್ರಿ ಬದಲಾವಣೆ ಸುದ್ದಿ ಬರೀ ಊಹಾಪೋಹ. ಯಡಿಯೂರಪ್ಪ ಅವರು ತಳಮಟ್ಟದಿಂದ ಪಕ್ಷ ಕಟ್ಟಿದ್ದಾರೆ. ಕೆಲವರ ಹೇಳಿಕೆಗಳಿಂದ ಪಕ್ಷಕ್ಕೆ ನಷ್ಟವಾಗುತ್ತಿದೆ. ಪಕ್ಷದ ವರಿಷ್ಠರು ಎಲ್ಲವನ್ನೂ ಸರಿ ಮಾಡುವರು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಎಲ್ಲ ವರ್ಗದ ಮಠಾಧೀಶರೂ ಯಡಿಯೂರಪ್ಪ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅದು ಲಾಭಿಯಲ್ಲ. ಅವರ ಭಾವನೆಗಳ ಅಭಿವ್ಯಕ್ತಿ ಎಂದು ಸಮರ್ಥಿಸಿಕೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.