ADVERTISEMENT

ಮುಖ್ಯಮಂತ್ರಿಗೆ ಕಪ್ಪು ಬಾವುಟ: ಬಂಧನ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2019, 21:00 IST
Last Updated 8 ಡಿಸೆಂಬರ್ 2019, 21:00 IST
ಸಾಗರದಲ್ಲಿ ಟಿಪ್ಪು ಸಹರಾ ಯುವಜನ ಸಂಘದ ಸದಸ್ಯರನ್ನು ಪೊಲೀಸರು ಬಂಧಿಸಿದರು
ಸಾಗರದಲ್ಲಿ ಟಿಪ್ಪು ಸಹರಾ ಯುವಜನ ಸಂಘದ ಸದಸ್ಯರನ್ನು ಪೊಲೀಸರು ಬಂಧಿಸಿದರು   

ಸಾಗರ: ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸಿರುವುದನ್ನು ವಿರೋಧಿಸಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಸಿದ್ಧತೆ ನಡೆಸಿದ್ದಇಲ್ಲಿನ ಟಿಪ್ಪು ಸಹರಾ ಯುವಜನ ಸಂಘದ ಸದಸ್ಯರನ್ನು ಭಾನುವಾರ ಪೊಲೀಸರು ಅವರನ್ನು ಬಂಧಿಸಿದರು.

ಇಲ್ಲಿನ ನ್ಯೂ ಬಿ.ಎಚ್. ರಸ್ತೆಯ ರಿಲೆಯನ್ಸ್ ಪೆಟ್ರೋಲ್ ಬಂಕ್ ಬಳಿ ಟಿಪ್ಪು ಸಹರಾ ಸಂಘದ ಕಾರ್ಯಕರ್ತರು ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶಿಸಲು ತೆರೆಮರೆಯಲ್ಲಿ ಸಿದ್ಧರಾಗಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಮುಖ್ಯಮಂತ್ರಿ ವಾಹನ ಅಲ್ಲಿಗೆ ಬರುವ ಮುನ್ನವೇ ಪ್ರತಿಭಟನಕಾರರನ್ನು ವಶಕ್ಕೆ ಪಡೆದರು.

ಟಿಪ್ಪು ಸಹರಾ ಯುವಜನ ಸಂಘದ ಅಧ್ಯಕ್ಷ ಸೈಯದ್ ಜಮೀಲ್, ಮಹ್ಮದ್ ಗೌಸ್, ಮನ್ಸೂರ್ ಅಹ್ಮದ್, ಸಲೀಂ, ಅಸಾದುಲ್ಲಾಖಾನ್, ಇರ್ಷಾದ್, ಶಹಬ್ಬಾಜ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ADVERTISEMENT

ದೂಗೂರು ಬಂಧನ:ನಗರದಲ್ಲಿ ಇಂದಿರಾ ಕ್ಯಾಂಟಿನ್ ಕಟ್ಟಡ ಸಿದ್ಧವಾಗಿದ್ದರೂ ಅದನ್ನು ಉದ್ಘಾಟನೆ ಮಾಡುವಲ್ಲಿ ವಿಳಂಬ ನೀತಿ ತೋರುತ್ತಿರುವುದನ್ನು ಖಂಡಿಸಿ ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಹೇಳಿಕೆ ನೀಡಿದ್ದ ದಲಿತ ಸಂಘರ್ಷ ಸಮಿತಿ ಮುಖಂಡ ಪರಮೇಶ್ವರ ದೂಗೂರು ಅವರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಭಾನುವಾರ ಬೆಳಿಗ್ಗೆಯೇ ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.