ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ, ಶಿಕಾರಿಪುರದ ಶಾಸಕರೂ ಆದ ಬಿ.ಎಸ್.ಯಡಿಯೂರಪ್ಪ ಗುರುವಾರ ನಗರಕ್ಕೆ ಬಂದಿದ್ದರು.
ಭದ್ರಾವತಿ ಮೂಲಕ ಶಿಕಾರಿಪುರಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಅವರು ಶಿವಮೊಗ್ಗಕ್ಕೆ ಬಂದಿದ್ದರು. ವಿಶ್ರಾಂತಿಯ ಮೂಡ್ನಲ್ಲಿದ್ದ ಅವರು ಬಹಳ ದಿನಗಳ ನಂತರ ಬೆಂಬಲಿಗರೊಂದಿಗೆ ಸೇರಿ ಇಲ್ಲಿನ ಮೀನಾಕ್ಷಿ ಭವನದಲ್ಲಿ ಮಸಾಲೆ ದೋಸೆ, ಉದ್ದಿನವಡೆ ತಿಂದು ಚಹಾ ಸೇವಿಸಿದರು. ಪರಸ್ಪರ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಸುಡಾ ಮಾಜಿ ಅಧ್ಯಕ್ಷ ಜ್ಯೋತಿಪ್ರಕಾಶ್, ನಗರಸಭೆ ಮಾಜಿ ಸದಸ್ಯ ಎನ್.ಜೆ.ರಾಜಶೇಖರ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಜಗದೀಶ್, ಮುಖಂಡರಾದ ರಾಜೇಶ್ ಕಾಮತ್, ದಿವಾಕರಶೆಟ್ಟಿ, ಮುರಳೀಧರ, ಸತೀಶ ಹಾಜರಿದ್ದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಲು ಯಡಿಯೂರಪ್ಪ ನಿರಾಕರಿಸಿದರು. ಬೆಳಗಾವಿಯ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ಶಾಸಕ ಕೆ.ಎಸ್.ಕೆ.ಎಸ್. ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸದೇ ತೆರಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.