ADVERTISEMENT

ಲಿಂಗಾಯಿತ ಸ್ವತಂತ್ರ ಧರ್ಮ: ಶಿವಕುಮಾರ್ ಹೇಳಿಕೆ ಯಡಿಯೂರಪ್ಪ ಸ್ವಾಗತ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2018, 12:12 IST
Last Updated 20 ಅಕ್ಟೋಬರ್ 2018, 12:12 IST

ಶಿವಮೊಗ್ಗ: ಲಿಂಗಾಯಿತ ಸ್ವತಂತ್ರ ಧರ್ಮ ಕುರಿತು ಸಚಿವ ಡಿ.ಕೆ. ಶಿವಕುಮಾರ್ ಹೇಳಿಕೆ ಸ್ವಾಗತಾರ್ಹ. ಈಗಲಾದರೂ ಕಾಂಗ್ರೆಸ್‌ಗೆ ಬುದ್ಧಿ ಬಂದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಕುಟುಕಿದರು.

ಲೋಕಸಭಾ ಉಪಚುನಾವಣೆ ಪ್ರಚಾರದ ವೇಳೆ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿ ತಪ್ಪುಹೆಜ್ಜೆ ಇಟ್ಟಿತ್ತು ಎಂದು ಶಿವಕುಮಾರ್ ಒಪ್ಪಿಕೊಂಡಿದ್ದಾರೆ. ಈ ಕುರಿತು ಟೀಕಿಸುವ, ಚರ್ಚಿಸುವ ಅಗತ್ಯವಿಲ್ಲ. ಅವರಿಗೆ ವಾಸ್ತವ ಸ್ಥಿತಿ ಅರ್ಥವಾಗಿದೆಯಲ್ಲ ಅಷ್ಟೆ ಸಾಕು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.