ADVERTISEMENT

ಶಿವಮೊಗ್ಗ| ಮನೆಯಲ್ಲಿ ಅಗ್ನಿ ಅವಘಡ: ಉದ್ಯಮಿ ಭೂಪಾಳಂ ಶರತ್ ಸಾವು

​ಪ್ರಜಾವಾಣಿ ವಾರ್ತೆ
Published 8 ಜನವರಿ 2023, 5:09 IST
Last Updated 8 ಜನವರಿ 2023, 5:09 IST
 ಭೂಪಾಳಂ ಎಸ್.ಶರತ್
ಭೂಪಾಳಂ ಎಸ್.ಶರತ್    

ಶಿವಮೊಗ್ಗ: ಅಗ್ನಿ ಅವಘಡದಲ್ಲಿ ನಗರದ ಉದ್ಯಮಿ ಭೂಪಾಳಂ ಎಸ್.ಶರತ್ (39) ಭಾನುವಾರ ಬೆಳಿಗ್ಗೆ ಸಾವಿಗೀಡಾಗಿದ್ದಾರೆ. ಶರತ್ ಪುತ್ರ ಸಂಚಿತ್ (12) ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಭೂಪಾಳಂ ಶಶಿಧರ್ ಸೇರಿದಂತೆ ಕುಟುಂಬದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಲ್ಲಿನ ಕುವೆಂಪು ರಸ್ತೆಯ ಜಿಲ್ಲಾ ಪಂಚಾಯ್ತಿ ಕಚೇರಿ ಎದುರು ಇರುವ ಭೂಪಾಳಂ ಕುಟುಂಬದ ಬಂಗಲೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಳಗಿನ ಜಾವ ಅಗ್ನಿ ಅವಘಡ ನಡೆದಿದೆ ಎನ್ನಲಾಗಿದೆ.

ADVERTISEMENT

ಈ ವೇಳೆ ಮನೆಯಲ್ಲಿ ದಟ್ಟ ಹೊಗೆ ಆವರಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಗಾಯಗೊಂಡಿದ್ದ ಮಗನನ್ನು ಹೊರಗೆ ಹೊತ್ತು ತಂದಿದ್ದ ಶರತ್ ಮತ್ತೆ ಮನೆಯ ಒಳಗೆ ಹೋಗಿದ್ದಾರೆ. ಈ ವೇಳೆ ಹೊಗೆಯ ಮಧ್ಯೆ ಸಿಲುಕಿ, ಪ್ರಜ್ಞೆತಪ್ಪಿ ಬಿದ್ದಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಜೊತೆಗೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ತೀವ್ರ ಅಸ್ವಸ್ಥರಾಗಿ ಬಿದ್ದಿದ್ದ ಶರತ್ ಅವರನ್ನು ರಕ್ಷಣೆ ಮಾಡಿ, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಶರತ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಭೂಪಾಳಂ ಶರತ್ ಶಿವಮೊಗ್ಗ ಚೇಂಬರ್ ಆಫ್ ಕಾಮರ್ಸ್ ನಿರ್ದೇಶಕರಾಗಿದ್ದರು.

ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.