ಸಾಗರ: ಉಪ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ರಾಜ್ಯ ಸಚಿವ ಸಂಪುಟವನ್ನು ವಿಸ್ತರಿಸಬೇಕೋ ಅಥವಾ ಪುನರ್ ರಚಿಸಬೇಕೋ ಎಂಬ ವಿಷಯದ ಕುರಿತು ವರಿಷ್ಠರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದುಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪುತ್ರಿಯ ವಿವಾಹ ಆರತಕ್ಷತೆಗೆ ಭಾನುವಾರ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
‘ಎಲ್ಲಾ ಅನರ್ಹ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೊ ಅಥವಾ ಬೇಡವೋ ಎನ್ನುವ ಕುರಿತೂ ವರಿಷ್ಠರ ಅಭಿಪ್ರಾಯ ಪಡೆದೇ ಮುಂದುವರಿಯುತ್ತೇವೆ‘ ಎಂದು ಸ್ಪಷ್ಟಪಡಿಸಿದರು.
‘ಉಪಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 13 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ತಲಾ ಒಂದೊಂದು ಸ್ಥಾನ ಗೆದ್ದರೆ ಹೆಚ್ಚು. ಮುಂದಿನ ಮೂರೂವರೆ ವರ್ಷಗಳ ಕಾಲ ರಾಜ್ಯದಲ್ಲಿ ಸ್ಥಿರ ಸರ್ಕಾರ ನೀಡುತ್ತೇವೆ.ಮುಂಬರುವ ಬಜೆಟ್ನಲ್ಲಿ ಎಲ್ಲಾ ವರ್ಗಗಳ ಹಿತ ಕಾಯುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಘೋಷಿಸಲಾಗುವುದು. ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಮುನ್ನಡೆಯುತ್ತೇವೆ‘ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.