ADVERTISEMENT

ಕಾಗೋಡು ಸತ್ಯಾಗ್ರಹದ 70ನೇ ವರ್ಷಾಚರಣೆ ರದ್ದು

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2021, 14:32 IST
Last Updated 17 ಏಪ್ರಿಲ್ 2021, 14:32 IST

ಸಾಗರ: ಇಲ್ಲಿನ ಕಾಗೋಡು ತಿಮ್ಮಪ್ಪ ರಂಗಮಂದಿರದಲ್ಲಿ ಕಾಗೋಡು ರೈತ ಚಳವಳಿ ಸಂಸ್ಮರಣಾ ಸಮಿತಿ, ಡಾ.ರಾಮಮನೋಹರ ಲೋಹಿಯಾ ಟ್ರಸ್ಟ್ ಭಾನುವಾರ ಏರ್ಪಡಿಸಿದ್ದ ಕಾಗೋಡು ಸತ್ಯಾಗ್ರಹದ 70ನೇ ವರ್ಷಾಚರಣೆ ಕಾರ್ಯಕ್ರಮವನ್ನು ಕೋವಿಡ್ ಕಾರಣಕ್ಕಾಗಿ ರದ್ದುಪಡಿಸಲಾಗಿದೆ.

ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದ್ದು, ಕೋವಿಡ್ ಮಾರ್ಗದರ್ಶಿ ಸೂತ್ರಗಳನ್ನು ಅನುಸರಿಸಿ ಕಾರ್ಯಕ್ರಮ ನಡೆಸುವುದು ಕಷ್ಟಸಾಧ್ಯ ಎನ್ನುವ ಕಾರಣಕ್ಕೆ ಜಿಲ್ಲಾಡಳಿತದ ಸೂಚನೆ ಮೇರೆಗೆ ಕಾರ್ಯಕ್ರಮ ರದ್ದಾಗಿದೆ ಎಂದು ಸಂಚಾಲಕರಾದ ಶಿವಾನಂದ ಕುಗ್ವೆ, ಎನ್.ಡಿ. ವಸಂತಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT