ADVERTISEMENT

ಕಾರು–ಲಾರಿ ಡಿಕ್ಕಿ: ಮಗು ಸಾವು

​ಪ್ರಜಾವಾಣಿ ವಾರ್ತೆ
Published 19 ಜುಲೈ 2019, 14:40 IST
Last Updated 19 ಜುಲೈ 2019, 14:40 IST

ಶಿವಮೊಗ್ಗ: ಹೊಸನಗರ ತಾಲ್ಲೂಕು ರಿಪ್ಪನ್‌ಪೇಟೆ ಸೂಡೂರು ಗೇಟ್‌ ಸಮೀಪ ಶುಕ್ರವಾರ ಲಾರಿ ಮತ್ತು ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಎರಡು ವರ್ಷದ ಮಗು ಸ್ಕಂದ ಮೃತಪಟ್ಟಿದೆ.

ಸ್ಕಂದಳ ತಾಯಿ, ತಂದೆ ಶಾಂತಕುಮಾರಿ, ರಾಮಪ್ಪ ತೀವ್ರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಖಾಸಗಿ ಆಸ್‍ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾಗರ ತಾಲ್ಲೂಕು ಗಾಳಿಪುರದ ಈ ಶಿಕ್ಷಕ ದಂಪತಿ ಮಾರುತಿ–800 ಕಾರಿನಲ್ಲಿ ರಿಪ್ಪನ್‌ಪೇಟೆ ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದರು. ಲಾರಿ ಹೊಸನಗರದತ್ತ ಸಾಗುತ್ತಿತ್ತು. ಪ್ರಕರಣ ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.