ಶಿವಮೊಗ್ಗ: ಹೊಸನಗರ ತಾಲ್ಲೂಕು ರಿಪ್ಪನ್ಪೇಟೆ ಸೂಡೂರು ಗೇಟ್ ಸಮೀಪ ಶುಕ್ರವಾರ ಲಾರಿ ಮತ್ತು ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಎರಡು ವರ್ಷದ ಮಗು ಸ್ಕಂದ ಮೃತಪಟ್ಟಿದೆ.
ಸ್ಕಂದಳ ತಾಯಿ, ತಂದೆ ಶಾಂತಕುಮಾರಿ, ರಾಮಪ್ಪ ತೀವ್ರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಾಗರ ತಾಲ್ಲೂಕು ಗಾಳಿಪುರದ ಈ ಶಿಕ್ಷಕ ದಂಪತಿ ಮಾರುತಿ–800 ಕಾರಿನಲ್ಲಿ ರಿಪ್ಪನ್ಪೇಟೆ ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದರು. ಲಾರಿ ಹೊಸನಗರದತ್ತ ಸಾಗುತ್ತಿತ್ತು. ಪ್ರಕರಣ ರಿಪ್ಪನ್ಪೇಟೆ ಠಾಣೆಯಲ್ಲಿ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.