ADVERTISEMENT

ಬೈಕ್‌ಗೆ ಕಾರು ಡಿಕ್ಕಿ: ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2022, 4:31 IST
Last Updated 8 ಆಗಸ್ಟ್ 2022, 4:31 IST

ಕುಂಸಿ: ಸಮೀಪದ ಮಂಡಘಟ್ಟ ಬಳಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸುರೇಂದ್ರ (45) ಮೃತಪಟ್ಟವರು. ಅವರುಶನಿವಾರ ರಾತ್ರಿ ಕೆಲಸ ಮುಗಿಸಿಕೊಂಡು ಹೋಗುತ್ತಿದ್ದಾಗ ರಿಪ್ಪನ್‌ಪೇಟೆಯಿಂದ ಶಿವಮೊಗ್ಗದ ಕಡೆ ಹೋಗುತ್ತಿದ್ದ ಇನ್ನೊವಾ ಕಾರು ಡಿಕ್ಕಿ ಹೊಡೆದಿದೆ.

ಅತಿವೇಗದಲ್ಲಿ ಬಂದ ಕಾರು ಬೈಕ್‌‌ಗೆ ಡಿಕ್ಕಿ ಹೊಡೆದು ನಿಲ್ಲಿಸದೇ ಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕುಂಸಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.