ಸಾಗರ: ಇಲ್ಲಿನ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಚ್.ಮಹಾಬಲೇಶ್ವರ್ ಅವರಿಗೆ ಚೆಕ್ ಅಮಾನ್ಯ ಪ್ರಕರಣದಲ್ಲಿ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯ ಶನಿವಾರ ಶಿಕ್ಷೆ ವಿಧಿಸಿದೆ.
ನಗರಸಭೆಯ ನಿವೃತ್ತ ಕಂದಾಯ ಅಧಿಕಾರಿ ಎಸ್.ಬಿ.ರಘುನಾಥ್ ಅವರಿಂದ ಮಹಾಬಲೇಶ್ವರ್ 2016ನೇ ಸಾಲಿನಲ್ಲಿ ₹ 6 ಲಕ್ಷ ಹಣವನ್ನು ಸಾಲವಾಗಿ ಪಡೆದಿದ್ದರು. ನಿಗದಿತ ಅವಧಿಯಲ್ಲಿ ಸಾಲ ಮರು ಪಾವತಿಸದೆ ನಂತರ ಸಾಲ ತಿರುವಳಿಗಾಗಿ ಅವರು ನೀಡಿದ್ದ ಚೆಕ್ ಬೌನ್ಸ್ ಆಗಿತ್ತು.
ಈ ಸಂಬಂಧ ಎಸ್.ಬಿ.ರಘುನಾಥ್ ಇಲ್ಲಿನ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ನ್ಯಾಯಾಧೀಶರಾದ ಶ್ರೀಶೈಲ ಭೀಮಸೇನ ಬಗಾಡಿ ಅವರು ದೂರುದಾರರಾದ ರಘನಾಥ್ ಅವರಿಗೆ ಮಹಾಬಲೇಶ್ವರ್ ₹ 6 ಲಕ್ಷ ನೀಡುವ ಜೊತೆಗೆ ₹ 1.50 ಲಕ್ಷ ದಂಡವಾಗಿ ಪಾವತಿಸಬೇಕು. ತಪ್ಪಿದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.