ಶಿವಮೊಗ್ಗ: ನಿರಂತರ ಮಳೆಯಿಂದ ತುಂಬಿ ಹರಿಯುತ್ತಿದ್ದ ಆರ್ಎಂಎಲ್ ನಗರದ ರಾಜಕಾಲುವೆಯಲ್ಲಿ ಒಂದು ತಿಂಗಳ ಮಗುವೊಂದು ತೇಲಿಬಂದಿದೆ.
ಮಳೆ ಹಾನಿಯ ಸಮೀಕ್ಷೆ ನಡೆಸಲು ತೆರಳಿದ್ದ ಸ್ವಯಂ ಸೇವಾ ತಂಡದ ಸದಸ್ಯರು ಭಾರತ್ ಫೌಂಡ್ರಿ ಬಳಿಯ ಕಾಲುವೆಯಲ್ಲಿ ಗಂಡು ಮಗುವಿನ ಶವ ಪತ್ತೆ ಹಚ್ಚಿ, ದೊಡ್ಡಪೇಟೆ ಠಾಣೆಗೆ ಮಾಹಿತಿ ನೀಡಿದ್ದಾರೆ.
ಮನೆಗಳಿಗೆ ನೀರು ನುಗ್ಗಿದಾಗ ಮಗು ಕೊಚ್ಚಿಕೊಂಡು ಬಂದಿದೆಯೇ? ಬೇರೆ ಕಾರಣಗಳಿಗಾಗಿ ನೀರಿಗೆ ಎಸೆಯಲಾಗಿದೆಯೇ ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.