ಸಾಗರ: ಮನೆಯಲ್ಲಿದ್ದ ನೀರು ತುಂಬಿದ ಬಕೆಟ್ಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ನಗರದ ಜೋಸೆಫ್ ನಗರ ಬಡಾವಣೆಯಲ್ಲಿ ಭಾನುವಾರ ನಡೆದಿದೆ.
ಮೆಕ್ಯಾನಿಕ್ ವೃತ್ತಿ ನಡೆಸುತ್ತಿರುವ ಆಸಿಫ್ ಅವರ ಪುತ್ರಿ ಆನಮ್ ಫಾತಿಮಾ ಮೃತ ಮಗು. ಮಧ್ಯಾಹ್ನದ ವೇಳೆ ಮನೆಯವರು ನಿದ್ರಿಸುತ್ತಿದ್ದ ವೇಳೆಯಲ್ಲಿ ಮೂಲೆಯಲ್ಲಿದ್ದ ಬಕೆಟ್ನಿಂ ನೀರು ತೆಗೆಯಲು ಆನಮ್ ಮುಂದಾದಾಗ ಆಯ ತಪ್ಪಿ ಬಕೆಟ್ನೊಳಗೆ ಬಿದ್ದು ಉಸಿರುಗಟ್ಟಿ ಸಾವು ಸಂಭವಿಸಿದೆ ಎನ್ನಲಾಗಿದೆ.
ತೀವ್ರ ಅಸ್ವಸ್ಥಗೊಂಡಿದ್ದ ಮಗುವನ್ನು ಕೂಡಲೇ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಚಿಕಿತ್ಸೆಗೆ ಸ್ಪಂದಿಸಿದೆ ಮಗು ಮೃತಪಟ್ಟಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.