ADVERTISEMENT

ಈ ಬಾರಿ ಇತಿಮಿತಿಯ ಬಜೆಟ್: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2020, 13:17 IST
Last Updated 23 ಫೆಬ್ರುವರಿ 2020, 13:17 IST

ಶಿವಮೊಗ್ಗ: ಹಣಕಾಸಿನ ಇತಿಮಿತಿಯ ಮಧ್ಯೆ ಈ ಬಾರಿಯ ಬಜೆಟ್‌ ಮಂಡನೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಭಾನುವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಲಭ್ಯ ಸಂಪನ್ಮೂಲ ಬಳಕೆ ಮಾಡಿಕೊಂಡು ಉತ್ತಮ ಬಜೆಟ್ ಮಂಡಿಸಲು ಪ್ರಯತ್ನಿಸಿರುವೆ. ಕೃಷಿ, ನೀರಾವರಿಗೆ ಹೆಚ್ಚಿನಆದ್ಯತೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಗೆ ಹೊಸ ಕೈಗಾರಿಕೆಗಳನ್ನು ತರುವ ಪ್ರಯತ್ನ ನಡೆದಿದೆ. ಅದಕ್ಕೆ ಪೂರಕವಾಗಿ ವಿಮಾನ ನಿಲ್ದಾಣಅಭಿವೃದ್ಧಿಗೆ ಹಣ ನೀಡಲಾಗಿದೆ. ಸಿಗಂಧೂರು ಸೇತುವೆ ಸೇರಿದಂತೆಮೂರು ವರ್ಷಗಳಲ್ಲಿ ಎಲ್ಲ ಅಭಿವೃದ್ಧಿ ಯೋಜನೆಗಳನ್ನೂಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ADVERTISEMENT

ಹಣಕಾಸು ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣ ಕಡಿಮೆಯಾಗಿದೆಎಂಬ ಪ್ರಶ್ನೆಗೆ, ‘ಸರಿ ಪಡಿಸಿಕೊಳ್ಳುತ್ತೇವೆ’ ಎಂದಷ್ಟೇ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.