ADVERTISEMENT

ಮಂಜುನಾಥಗೌಡ ಮನೆ ಮೇಲೆ ಇ.ಡಿ ದಾಳಿ: ಜನಪರ ಸಮಿತಿ ಖಂಡನೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2023, 16:26 IST
Last Updated 6 ಅಕ್ಟೋಬರ್ 2023, 16:26 IST
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ನಿವಾಸದ ಮೇಲೆ ನಡೆದಿರುವ ಇ.ಡಿ ದಾಳಿಯನ್ನು ಖಂಡಿಸಿ ಜನಪರ ಹೋರಾಟ ಸಮಿತಿಯಿಂದ ಶುಕ್ರವಾರ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು 
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ನಿವಾಸದ ಮೇಲೆ ನಡೆದಿರುವ ಇ.ಡಿ ದಾಳಿಯನ್ನು ಖಂಡಿಸಿ ಜನಪರ ಹೋರಾಟ ಸಮಿತಿಯಿಂದ ಶುಕ್ರವಾರ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು    

ಶಿವಮೊಗ್ಗ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ಮಾಡಿರುವುದನ್ನು ಖಂಡಿಸಿ ಜನಪರ ಹೋರಾಟ ಸಮಿತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಮಂಜುನಾಥ ಗೌಡರ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿರುವ ಕ್ರಮ ರಾಜಕೀಯ ಪ್ರೇರಿತ. ಗೌಡ ಅವರು ಕಾಂಗ್ರೆಸ್ ಮುಖಂಡರಾಗಿದ್ದು, ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ದಾಳಿ ಖಂಡನೀಯ ಎಂದು ಸಮಿತಿಯ ಸದಸ್ಯರು ತಿಳಿಸಿದರು.

‘ಮಂಜುನಾಥ ಗೌಡರು ಆರು ಬಾರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಡಿಸಿಸಿ ಬ್ಯಾಂಕಿನಲ್ಲಿ ಈ ಹಿಂದೆ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅವರನ್ನು ಆರೋಪಿಯನ್ನಾಗಿಸಲಾಗಿತ್ತು. ಸಿಐಡಿ ತನಿಖೆ ಕೂಡ ಮಾಡಲಾಗಿತ್ತು. ಆದರೆ ತನಿಖೆಯಲ್ಲಿ ಅವರ ಪಾತ್ರ ಇಲ್ಲ ಎಂದು ಹೇಳಲಾಗಿದೆ. ಅವರು ಮತ್ತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಇವರ ಏಳಿಗೆ ಸಹಿಸದ ಕೆಲವರು ರಾಜಕೀಯ ಪ್ರೇರಿತವಾಗಿ ಈ ದಾಳಿ ನಡೆಸಲು ಕುಮ್ಮಕ್ಕು ನೀಡಿದ್ದಾರೆ’ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ADVERTISEMENT

ನಾಗರಾಜ್ ಕಂಕಾರಿ, ಎಚ್.ಪಾಲಾಕ್ಷಿ, ಎನ್.ಎಸ್.ಮಹೇಶ್, ಗಾಡಿಕೊಪ್ಪ ರಾಜಣ್ಣ, ಅನಿಲ್‌ಕುಮಾರ್, ಆನಂದ್, ಉಮೇಶ್, ಭಾಸ್ಕರ್. ಶಾಮು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.