ADVERTISEMENT

ಮತಾಂತರ ಆರೋಪ: ಮನೆ ಮುಂದೆ ಜಮಾಯಿಸಿದ ಜನ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2021, 6:27 IST
Last Updated 18 ಅಕ್ಟೋಬರ್ 2021, 6:27 IST

ಸಾಗರ: ಇಲ್ಲಿನ ಗೋಪಾಲಗೌಡ ನಗರ ಬಡಾವಣೆಯಲ್ಲಿ ಮಹಿಳೆಯೊಬ್ಬರ ಮತಾಂತರ ಮಾಡಲಾಗಿದೆ ಎಂಬ ಅನುಮಾನದ ಕಾರಣಅವರ ಮನೆಯ ಮುಂದೆ ಜನರ ಗುಂಪು ಜಮಾವಣೆಯಾಗಿತ್ತು.

ಮಹಿಳೆಯೊಬ್ಬರು ತನ್ನ ಗಂಡ ಕುಡಿಯುವುದನ್ನು ಬಿಟ್ಟರೆ ಮೇರಿ ಮಾತೆಯ ಪ್ರತಿಮೆ ತಂದು ಪೂಜಿಸುವುದಾಗಿ ಹರಕೆ ಹೊತ್ತಿದ್ದರು ಎನ್ನಲಾಗಿದೆ. ಹೀಗಾಗಿ ಭಾನುವಾರ ಅವರು ಮೇರಿ ಮಾತೆ ಪ್ರತಿಮೆಗೆ ಪೂಜೆ ಸಲ್ಲಿಸಿದ್ದರು.

ಇದು ಮತಾಂತರವಾಗಿದೆ ಎಂಬ ಗೊಂದಲಕ್ಕೆ ಕಾರಣವಾಗಿತ್ತು. ಬಳಿಕ ಯಾವುದೇ ರೀತಿಯ ಮತಾಂತರ ನಡೆದಿಲ್ಲ ಎಂಬ ವಿಷಯ ಗೊತ್ತಾಗಿದೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.